ಚಂಡೀಗಢ: ಪಂಜಾಬ್ ರಾಜ್ಯ ವಿಧಾನಸಭೆ ಚುನಾವಣೆ ಶನಿವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 70 ರಷ್ಟು ಮತದಾನವಾಗಿದೆ. ಆಡಳಿತಾರೂಢ ಶಿರೋಮಣಿ ಅಕಾಲಿ ದಳ-ಬಿಜೆಪಿ ಮೈತ್ರಿ, ಕಾಂಗ್ರೆಸ್ ಹಾಗೂ ಆಪ್ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ.
ಕೆಲವೊಂದು ಅಹಿತಕರ ಘಟನೆ ನಡೆದಿರುವುದು ಬಿಟ್ಟರೆ ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ವಿ.ಕೆ.ಬ್ಹಾವ್ರಾ ತಿಳಿಸಿದ್ದಾರೆ.
ಸಂಗ್ರೂರ್ ಜಿಲ್ಲೆಯ ಸುಲ್ತಾನ್ ಪುರ ಗ್ರಾಮದಲ್ಲಿ ಆಪ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಟಾರ್ನ್ ಟರನ್ ಜಿಲ್ಲೆಯ ಲಾಲು ಗುಮನ್ ಗ್ರಾಮದಲ್ಲಿ ಮತಗಟ್ಟೆಯ ಹೊರಗೆ ಅಕಾಲಿದಳ ಬೆಂಬಲಿಗರು ಗುಂಡು ಹಾರಿಸಿದ್ದರಿಂದ ಜಗ್ಜೀತ್ ಸಿಂಗ್ ಎಂಬ ಕಾಂಗ್ರೆಸ್ ಕಾರ್ಯಕರ್ತ ಗಾಯಗೊಂಡಿದ್ದಾರೆ.
ಪಂಜಾಬ್ ಎಲೆಕ್ಷನ್ ನಲ್ಲಿ ಇದೇ ಮೊದಲ ಬಾರಿಗೆ ಮತದಾರರ ಪ್ರಮಾಣಿಸಿದ ಕಾಗದದ ಆಡಿಟ್ ಟ್ರಯಲ್ (VVPAT) ಯಂತ್ರಗಳನ್ನು ನಿಯೋಜಿಸಲಾಗಿತ್ತು. ಅದು ಮತದಾನ ನಡೆಯುತ್ತಿದ್ದ ಮಧ್ಯದಲ್ಲಿ ಕೆಟ್ಟು ಹೋಯಿತು.
2012 ರ ಚುನಾವಣೆಯಲ್ಲಿ ಶೇಕಡಾ 79 ಮಂದಿ ಮತದಾರರು ಮತ ಚಲಾಯಿಸಿದ್ದರು.
ಮತದಾನ ಮುಗಿದ ಬಳಿಕ ಹೇಳಿಕೆ ಹೊರಡಿಸಿರುವ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ.
ಒಟ್ಟು 1.98 ಕೋಟಿ ಜನ ಈ ವರ್ಷ ತಮ್ಮ ಹಕ್ಕು ಚಲಾಯಿಸಿದ್ದು, 1,145 ಅಭ್ಯರ್ಥಿಗಳ ಭವಿಷ್ಯ ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.