ನವದೆಹಲಿ: ಭಾರತದ ಸ್ವಾತಂತ್ರ್ಯ ಒಂದು ಕುಟುಂಬದಿಂದ ಬಂದಿಲ್ಲ. ಅಸಂಖ್ಯರ ಬಲಿದಾನ ಪ್ರತಿಫಲವೇ ಸ್ವಾತಂತ್ರ್ಯ. ಆದರೂ ಕಾಂಗ್ರೆಸ್ ಹೇಳುವಂತೆ ಇಡೀ ದೇಶ ಒಂದು ಕುಟುಂಬಕ್ಕೆ ಋಣಿಯಾಗಿರಬೇಕೆದೆ ಎಂದು ಪ್ರಧಾನಿ ಮೋದಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಬಜೆಟ್ ಅಧಿವೇಶನದ ಸಂಸತ್ ಕಲಾಪದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಮಂಗಳವಾರ ವಂದನಾ ನಿರ್ಣಯ ಮಂಡಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ಗದಾಪ್ರಹಾರ ನಡೆಸಿದ್ದಾರೆ.
ಲೋಕಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ರಕ್ಷಣೆಯ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಪ್ರಜಾಪ್ರಭುತ್ವವವನ್ನು ರಕ್ಷಿಸಿದ್ದಾಗಿ ಹೇಳುತ್ತಿರುವ ಕಾಂಗ್ರೆಸ್ ಪಕ್ಷ 1975 ರಲ್ಲಿ ಒಂದು ಕುಟುಂಬಕ್ಕಾಗಿ ಪ್ರಜಾಪ್ರಭುತ್ವವವನ್ನು ಅಡವಿಟ್ಟಿತ್ತು. ಈ ಮೂಲಕ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಪಕ್ಷ ಹೈಜಾಕ್ ಮಾಡಿತ್ತು ಎಂದು ಮೋದಿ ಟೀಕಿಸಿದ್ದಾರೆ.
ಬಿಜೆಪಿಯಿಂದ ಒಂದು ನಾಯಿಯಾದರೂ ದೇಶಕ್ಕೆ ಬಲಿದಾನ ನೀಡಿದೆಯೇ ಎಂಬ ಹೇಳಿಕೆಗೂ ಪ್ರಧಾನಿ ನರೇಂದ್ರ ಮೋದಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ನಾವು ನಾಯಿ ಸಂಸ್ಕೃತಿಯಲ್ಲಿ ಬೆಳೆದುಬಂದವರಲ್ಲ. ಕಾಂಗ್ರೆಸ್ ಪಕ್ಷ ಸ್ವಚ್ಛತೆಯಿಂದ ಹಿಡಿದು ಪ್ರತಿಯೊಂದು ವಿಷಯದಲ್ಲೂ ಸಹ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ಗೆ ಬಡವರಿಗಿಂತ ಚುನಾವಣೆಗಳ ಮೇಲೆಯೇ ಹೆಚ್ಚು ಕಣ್ಣು ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಹಗರಣಗಳಿಗೆ ಸ್ಕ್ಯಾಮ್ ಗಳಿಗೆ ನೀಡಿದ್ದ ಹೊಸ ವ್ಯಾಖ್ಯಾನ( ಸೇವೆ, ಆತ್ಮವಿಶ್ವಾಸ, ಸಾಮರ್ಥ್ಯ, ನಮ್ರತೆ) ಎಂಬ ಹೇಳಿಕೆಯ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಹಗರಣಗಳಲ್ಲಿ ಸೇವೆ ಇದ್ಯಾ? ಸ್ಕ್ಯಾಂ ಗಳಲ್ಲಿ ಸೇವೆಯನ್ನು ನೋಡುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.
ನೋಟು ನಿಷೇಧದ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿತ್ತು. ಆದರೆ ಚರ್ಚೆ ನಡೆಸಲು ವಿಪಕ್ಷಗಳು ೧ ದಿನವೂ ಅವಕಾಶ ನೀಡಲಿಲ್ಲ, ಕಾಂಗ್ರೆಸ್ ಗೆ ಕೇವಲ ಚುನಾವಣೆಯ ಚಿಂತೆ, ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಸಾಲ ಮಾಡಿದವರು ಸಾಲವನ್ನು ವಾಪಸ್ ನೀಡಲೇಬೇಕಾಗುತ್ತದೆ. ಬೇನಾಮಿ ವ್ಯವಹಾರ ಕಪ್ಪುಹಣ ಸಂಗ್ರಹದ ಮೂಲವಾಗಿದ್ದು, ಸರ್ಕಾರ ಕಪ್ಪುಹಣ ಸಂಗ್ರಹ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.