News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭ್ರಷ್ಟಾಚಾರ, ಕಪ್ಪು ಹಣ ವಿರುದ್ಧದ ಹೋರಾಟ ರಾಜಕೀಯವಲ್ಲ

Modi2
ನವದೆಹಲಿ: ನೋಟು ನಿಷೇಧದ ಮೇಲಿನ ಟೀಕೆಗಳಿಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭ್ರಷ್ಟಾಚಾರ ಮತ್ತು ಕಪ್ಪು ಹಣ ವಿರುದ್ಧದ ಹೋರಾಟ ರಾಜಕೀಯವಲ್ಲ. ಅದು ಯಾವುದೇ ನಿರ್ದಿಷ್ಟ ಪಕ್ಷವನ್ನು ಪ್ರತ್ಯೇಕಿಸುವುದಕಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಅವರು, ಭ್ರಷ್ಟಾಚಾರ ಮತ್ತು ಕಪ್ಪು ಹಣ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಕಾನೂನು ವ್ಯವಸ್ಥೆಗೆ ಮೋಸ ಮಾಡುವವರ ವಿರುದ್ಧ ಗಡುಸಿನಿಂದ ವ್ಯವಹರಿಸಬೇಕು. ಈ ಮೂಲಕ ಬಡವರನ್ನು ಬಲಪಡಿಸಬೇಕು ಎಂದು ಮೋದಿ ಹೇಳಿದ್ದಾರೆ.

ನೋಟು ನಿಷೇಧ ಮಾಡುವ ಕುರಿತು ೧೯೭೧ರಲ್ಲೇ ಮಾಧವ ಗೋಡಬೋಲೆ ಅವರು ಬರೆದಿರುವ ಪುಸ್ತಕದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ವಿತ್ತ ಸಚಿವರು ಸಲಹೆ ನೀಡಿದ್ದರು. ಆದರೆ ಅಂದು ಇಂದಿರಾ ಗಾಂಧಿ ಅವರು ಅದನ್ನು ನಿರಾಕರಿಸಿದ್ದರು. ಈ ಹಿಂದೆ ವಾಂಚೂ ಸಮಿತಿ ಕೂಡ ನೋಟು ನಿಷೇಧ ಸಂಬಂಧ ಶಿಫಾರಸ್ಸು ಮಾಡಿತ್ತು. ಇಂದಿರಾ ಗಾಂಧಿ ಅವರು ಅದನ್ನು ನಿರಾಕರಿಸಿದ್ದರು. ಆದರೆ ಇಂದಿರಾ ಗಾಂಧಿ ಚುನಾವಣೆ ಕುರಿತು ಚಿಂತಿಸಬೇಕು ಎಂದು ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ನೋಟು ನಿಷೇಧದ ಬಳಿಕ ಬ್ಯಾಂಕ್‌ಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಬಡ್ಡಿದರ ಕೂಡ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಸಂಸ್ಥೆಗಳು ರಾಜಕೀಯದಿಂದ ಹೊರತಾಗಿರಬೇಕು ಮತ್ತು ಆರ್‌ಬಿಐಯನ್ನು ಯಾವುದೇ ವಿವಾದಕ್ಕೆ ಎಳೆಯಬಾರದು. ಆಡಳಿತದಲ್ಲಿ ಬಹಳಷ್ಟು ಬೆಳವಣಿಗೆ ಮಾಡಲಾಗಿದ್ದು, ಜನಸಾಮಾನ್ಯರಿಗೆ ಬಲ ನೀಡಿದೆ. ಇ-ಮಾರುಕಟ್ಟೆ ಮೂಲಕ ವಿವಿಧ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ತರಲಾಗಿದೆ. ಜನರ ಅನುಕೂಲಕ್ಕಾಗಿ ಜನ್‌ಧನ್ ಯೋಜನೆ, ರೂಪೇ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಇಡೀ ವಿಶ್ವವೇ ಡಿಜಿಟಲೀಕರಣದತ್ತ ಸಾಗುತ್ತಿದ್ದು, ನಾವು ಹಿಂದುಳಿಯಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಪ್ರಚುರಪಡಿಸುವುದು ಅಗತ್ಯ. ಸ್ವಚ್ಛತೆ ವಿಚಾರದಲ್ಲಿ ದ.ಕೋರಿಯಾ, ಮಲೇಷ್ಯಾ ರಾಷ್ಟ್ರಗಳು ಭಾರತಕ್ಕೆ ಮಾದರಿಯಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯ ಹೆವಚ್ಚಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಇಂದು ಭಾರತ ತನ್ನ ಸಮಾಜದಲ್ಲಿನ ತಪ್ಪುಗಳನ್ನು ತಿದ್ದುವಲ್ಲಿ ಕಾಯ್ನಿರತವಾಗಿದೆ ಎಂದು ಮೋದಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top