ನವದೆಹಲಿ: ಭಾರತೀಯರ ಮನಸ್ಸಿನಲ್ಲಿ ವಂದೇ ಮಾತರಂಗೆ ವಿಶೇಷ ಸ್ಥಾನವಿದ್ದು ಅದನ್ನು ರವೀಂದ್ರ ನಾಥ ಠಾಕೂರ್ ಅವರ ರಾಷ್ಟ್ರಗೀತೆ ಜನಗಣ ಮನಕ್ಕೆ ಸಮನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ಅವರು ಬರೆದ ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸಮಾನ ಗೌರವವನ್ನು ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆಗೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ.
ಪಿಐಎಲ್ನ್ನು ವಜಾಗೊಳಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವಾಲಯ ಮುಖ್ಯ ನ್ಯಾಯಮೂರ್ತಿ ಜಿ.ರೋಹಿಣಿ ಮತ್ತು ನ್ಯಾಯಾಧೀಶ ಸಂಗೀತ ದಿಂಗ್ರಾ ಸೆಹಗಲ್ ಅವರಿದ್ದ ಪೀಠಕ್ಕೆ ಹೇಳಿಕೆ ನೀಡಿ ಇವೆರಡೂ ಗೀತೆಗಳನ್ನು ಸಮಾನವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಭಾರತೀಯ ರಾಜ್ಯಗಳ ಅಧಿಕೃತ ಚಿಹ್ನೆಗಳು, ರಾಷ್ಟ್ರಧ್ವಜ, ರಾಷ್ಟ್ರಗೀತೆಗಳನ್ನು ಸಮಾನವಾಗಿ ಗೌರವಿಸಿ ಪ್ರೀತಿಸುತ್ತೇವೆ ಇದಕ್ಕೆ ಕ್ರೋಢೀಕರಣದ ಅಗತ್ಯವಿದೆ ಎಂದು ಕೇಂದ್ರ ಉತ್ತರಿಸಿದೆ.
ವಂದೇ ಮಾತರಂಗೆ ಭಾರತೀಯರ ಭಾವನೆ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನ ಹೊಂದಿದ್ದು ಅದಕ್ಕೆ ಔಪಚಾರಿಕ ಬೆಂಬಲ ಅಥವಾ ಕ್ರೋಢೀಕರಣದ ಅಗತ್ಯವಿಲ್ಲ ಎಂದು ಗೃಹ ಸಚಿವಾಲಯ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹೇಳಿದೆ.
ಗೌತಮ್ ಆರ್ ಮೊರರ್ಕ ಎಂಬುವವರು ವಂದೇ ಮಾತರಂಗೆ ಸರಿಯಾದ ಗೌರವ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.