ನವದೆಹಲಿ: ಸಂಸತ್ತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಾಕಷ್ಟು ಅಗೌರವ ತೋರುತ್ತಿರುವ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಉಭಯ ಸದನಗಳಲ್ಲಿ ಉಂಟಾಗಿರುವ ಗದ್ದಲ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾಡಿರುವ ಅವರು, ಕಾಂಗ್ರೆಸ್ ನಾಯಕರು ಸಂಸತ್ತಿಗಾಗಲೀ, ಪ್ರಧಾನಮಂತ್ರಿಗಾಗಲೀ ಗೌರವವನ್ನು ಸೂಚಿಸುತ್ತಿಲ್ಲ. ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡಿ, ಉಭಯ ಸದನಗಳಲ್ಲಿ ಗದ್ದಲವನ್ನುಂಟು ಮಾಡುತ್ತಿದ್ದಾರೆ. ಕಾಂಗ್ರೆಸ್ ಅಗೌರವ ಸೂಚಿಸುತ್ತಿರುವುದು ಇದು ಮೊದಲೇನಲ್ಲ ಎಂದು ಅವರು ತಿಳಿಸಿದ್ದಾರೆ.
ಸದನದಲ್ಲಿ ನಾಯಕರು ಮೋದಿಯವರನ್ನು ಹಿಟ್ಲರ್, ಮುಸೊಲಿನಿ ಮತ್ತು ಗಡ್ಡಾಫಿ ಎಂದು ಕರೆದಿದ್ದಾರೆ. ಅಲ್ಲದೆ, ಮೋದಿಯವರ ವಿರುದ್ಧ ಸಾಕಷ್ಟು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡಿತನ ಸಂಗತಿ. ವಿಷಯವಲ್ಲದ ವಿಚಾರಗಳನ್ನು ವಿರೋಧ ಪಕ್ಷಗಳು ವಿಷಯ ಮಾಡುತ್ತಿವೆ. ಇದಕ್ಕೆ ಪ್ರಧಾನಿ ಮೋದಿಯವರು ಕ್ಷಮೆಯಾಚಿಸುವಂತೆ ಆಗ್ರಹಿಸುತ್ತಿದ್ದಾರೆ. ಮೋದಿಯವರೇಕೆ ಕ್ಷಮೆಯಾಚಿಸಬೇಕು ಎಂದು ನಾಯ್ಡು ಪ್ರಶ್ನಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತಮ ಕೆಲಸ ಮಾಡುತ್ತಿದ್ದು, ಸದನಕ್ಕೆ ಅರ್ಥಪೂರ್ಣ ಹಾಗೂ ನಿರ್ಮಾಣಾತ್ಮಕ ಮಧ್ಯಸ್ಥಿಕೆಯನ್ನು ವಹಿಸಿದ್ದಾರೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.