ಬಿಜ್ನೋರ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅತಿ ಹೆಚ್ಚು ಜೋಕ್ಸ್ ಮಾಡಲಾದ ರಾಜಕಾರಣಿ. ಅವರನ್ನು ಪಕ್ಷವೇ ದೂರವಿಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಕಟುವಾಗಿ ಟೀಕಿಸಿದ ಪ್ರಧಾನಿ ಮೋದಿ, ನೀವು ಗೂಗಲ್ನಲ್ಲಿ ಹುಡುಕಾಡಿದರೆ ಕಾಂಗ್ರೆಸ್ ನೇತಾ (ರಾಹುಲ್ ಗಾಂಧಿ) ಅವರ ಬಗ್ಗೆ ಮಾಡಲಾದಷ್ಟು ಗೇಲಿ ಇನ್ನಾವುದೇ ರಾಜಕಾರಣಿ ವಿರುದ್ಧ ಮಾಡಿಲ್ಲ. ರಾಹುಲ್ ಮಾತನಾಡುವ ರೀತಿ ಮತ್ತು ವರ್ತನೆಯಿಂದ ಕಾಂಗ್ರೆಸ್ ನಾಯಕರು ಅವರಿಂದ ೧೦ ಅಡ ದೂರ ಇರುತ್ತಾರೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ಬಿಜ್ನೋರ್ನಲ್ಲಿ ಪ್ರಚಾರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಅವರು, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಬಗೆಗಿನ ಸತ್ಯಾಸತ್ಯೆಗಳು ಮಾರ್ಚ್ ೧೧ರಂದು ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಘೋಷಿಸಿದ ಮೋದಿ ಅವರು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ತೀರಿಸಿಕೊಳ್ಳಲಾಗದೇ ರೈತರು ಆತ್ಮಹತ್ಯೆ ಮಾಡುತ್ತಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. ಅಲ್ಲದೇ ರಸಗೊಬ್ಬರದ ಬೆಲೆ ಕಡಿಮೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಅಪರಾಧಗಳು ಹೆಚ್ಚುತ್ತಿದ್ದು, ಜನರು ಭ್ರಷ್ಟಠಚಾರ, ಗೂಂಡಾ ಸರ್ಕಾರವನ್ನು ತಿರಸ್ಕರಿಸಬೇಕಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಗುರು ರವಿದಾಸರನ್ನು ನೆನಪಿಸಿದ ಪ್ರಧಾನಿ ಮೋದಿ, ಬಿಜೆಪಿ ಸರ್ಕಾರ ಗುರು ರವಿದಾಸ ಆದರ್ಶಗಳನ್ನು ಅನುಸರಿಸುತ್ತಿದೆ. ದೇಶದ ಅಭಿವೃದ್ಧಿಗಾಗಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಂತ್ರದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.