ನವದೆಹಲಿ: ಸರ್ಕಾರಿ ನೌಕರರ ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ನೀಡಿರುವ ಸರ್ವೋಚ್ಛ ನ್ಯಾಯಾಲಯ, ಜೇಷ್ಠತೆಯನ್ನು ಪರಿಗಣಿಸದೆ ಎಸ್ಸಿ, ಎಸ್ಟಿಗಳಿಗೆ ನೀಡಲಾದ ಬಡ್ತಿ ಆದೇಶಗಳನ್ನು ಮೂರು ತಿಂಗಳಲ್ಲಿ ಹಿಂಪಡೆಯುವಂತೆ ಕರ್ನಾಟಕಕ್ಕೆ ಆದೇಶಿಸಿದೆ.
ನ್ಯಾ. ಯು.ಲಲಿತ್ ಹಾಗೂ ನ್ಯಾ.ಆದರ್ಶ ಕುಮಾರ್ ಅವರನ್ನೊಳಗೊಂಡ ಪೀಠ, ಬಿ.ಕೆ.ಪವಿತ್ರ ಹಾಗೂ ಇತರರು ಮೀಸಲಾತಿ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ಈ ತೀರ್ಪನ್ನು ನೀಡಿದೆ. ಬಿಡಿಎನಲ್ಲಿ ಸೇವೆ ಸಲ್ಲಿಸುತ್ತಿದ್ದ ಪವಿತ್ರ ಹಾಗೂ ಇತರರು ಸೇವಾ ಬಡ್ತಿ ವಿಚಾರದಲ್ಲಿ ಮೀಸಲಾತಿ ವಿರುದ್ಧ 2011 ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಕಳೆದ ಮೂವತ್ತು ವರ್ಷಗಳಿಂದ ಕರ್ನಾಟಕ ಸರ್ಕಾರ ಅನುಸರಿಸುತ್ತಿದ್ದ ಮೀಸಲಾತಿ ವಿಧಾನವನ್ನು ಕೈಬಿಡಬೇಕೆಂದು ಸುಪ್ರೀಂ ತೀರ್ಪು ನೀಡಿದೆ. ಅನೇಕ ವರ್ಷಗಳಿಂದ ಸಿಗಬೇಕಿದ್ದ ಬಡ್ತಿಗಾಗಿ ಕಾಯ್ದುಕುಳಿತಿದ್ದ ಸಾಮಾನ್ಯ ಹಾಗೂ ಇತರೆ ಹಿಂದುಗಳಿದ ವರ್ಗಗಳ ನೌಕರರರಲ್ಲಿ ಪ್ರಸ್ತುತ ತೀರ್ಪು ಹೊಸ ಆಶಾಕಿರಣ ಮೂಡಿಸಿದೆ.
ಈಗಾಗಲೇ ಎಸ್ಸಿ,ಎಸ್ಟಿ ಮೀಸಲಾತಿಯಡಿಯಲ್ಲಿ ವೇಗವಾಗಿ ಬಡ್ತಿ ಹೊಂದಿ ನಿವೃತ್ತರಾದವರಿಗೆ, ಪಿಂಚಣಿ ಹಾಗೂ ಇತರ ಸೌಲಭ್ಯ ಪಡೆಯುತ್ತಿರುವವರಿಗೆ ಈ ಆದೇಶ ಅನ್ವಯವಾಗದು ಎಂದೂ ಸುಪ್ರೀಂ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಮಾರ್ಚ್ನಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ಸುಪ್ರೀಂ ಇದೇ ರೀತಿ ಆದೇಶ ನೀಡಿದ್ದು ಇಲ್ಲಿ ಉಲ್ಲೇಖನೀಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.