ನವದೆಹಲಿ: ಕ್ರಿಕೆಟ್ ಜಗತ್ತಿನಲ್ಲಿ ಆಗಾಗ ಸುದ್ದಿಯಲ್ಲಿರುವ ಭಾರತ ತಂಡದ ಎಡಗೈ ಬ್ಯಾಟ್ಸಮನ್ ಗೌತಮ್ ಗಂಭೀರ್ 1998ರ ಏಷ್ಯನ್ ಗೇಮ್ಸ್ ಬಾಕ್ಸಿಂಗ್ ಚಾಂಪಿಯನ್ ಡಿಂಕೋ ಸಿಂಗ್ಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.
ಇತ್ತೀಚೆಗೆ ಗಂಭೀರ್ ಅವರು ಪಿತ್ತರಸ ನಾಳದ ಕ್ಯಾನ್ಸರ್ನಿಂದ ಬಳಲುತ್ತಿರುವ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ, ಬಾಕ್ಸರ್ ಡಿಂಕೋ ಸಿಂಗ್ ಅವರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.
ಮಣಿಪುರ ಮೂಲದ 1998ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ವಿಜೇತ ಡಿಂಕೋ ಸಿಂಗ್ 1998ರಲ್ಲಿ ಅರ್ಜುನ ಪ್ರಶಸ್ತಿ ಹಾಗೂ 2013ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಡಿಂಕೋ ಸಿಂಗ್ ಅವರು ಮಂಗಳವಾರ ಇಂಫಾಲ್ನ ಆಸ್ಪತ್ರೆಯೊಂದರಲ್ಲಿ ಕಿಮೋಥೆರಪಿಗೆ ಒಳಗಾಗಿದ್ದು, ಯಕೃತ್ತಿನ (ಲಿವರ್) ಶೇ.70ರಷ್ಟು ಭಾಗವನ್ನು ಕಳೆದುಕೊಂಡಿದ್ದಾರೆ. ಅದನ್ನು ತೆಗೆಸಬೇಕೆಂದು ವೈದ್ಯರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.