ಭುವನೇಶ್ವರ: ವೈರಿಗಳ ಕ್ಷಿಪಣಿಗಳನ್ನು ಮಾರ್ಗಮಧ್ಯದಲ್ಲೇ ಧ್ವಂಸಗೊಳಿಸುವ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಕ್ಷಿಪಣಿಯ ಪರೀಕ್ಷೆಯನ್ನು ಇಂದು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.
ಒಡಿಶಾದ ಕರಾವಳಿಯಲ್ಲಿರುವ ಅಬ್ದುಲ್ ಕಲಾಂ ದ್ವೀಪದಲ್ಲಿ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆಯನ್ನು ಮಾಡಲಾಗಿದೆ. ಇದು 7.5 ಮೀಟರ್ ಉದ್ದ ಇದ್ದು, 30.ಕಿ.ಮೀ ಎತ್ತರದಲ್ಲೇ ವೈರಿಗಳ ಕ್ಷಿಪಣಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ.
ಇದರೊಂದಿಗೆ ಎರಡು ಪದರ ಖಂಡಾಂತರ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಅಭಿವೃದ್ದಿಯ ದಿಕ್ಕಿನಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಇದು ಭೂಮಿಯ ವಾತಾವರಣದ ಹೊರಭಾಗ ಮತ್ತು ಭೂಮಿಯ ವಾತಾವರಣದ ಒಳಭಾಗದಲ್ಲಿ ಆಗಮಿಸುವ ಕ್ಷಿಪಣಿಯನ್ನು ಗುರುತಿಸುತ್ತದೆ ಎಂದು ಡಿಆರ್ಡಿಒ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ನವೆಂಬರ್ 16 ರಂದು ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು, ಆದರೆ ಕಾರಣಾಂತರಗಳಿಂದ ಈ ಕ್ಷಿಪಣಿಯ ಪರೀಕ್ಷೆ ನಡೆದಿರಲಿಲ್ಲ. ಬದಲಾಗಿ ಡಿಆರ್ಡಿಒ ವಿಜ್ಞಾನಿಗಳು ಪೃಥ್ವಿ 2 ಕ್ಷಿಪಣಿಯ ಪರೀಕ್ಷೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.