ಲಕ್ಕುಂಡಿ (ಗದಗ) : ವೈವಿಧ್ಯಮಯ ಹಾಗೂ ವಿಶಿಷ್ಟ ಶಿಲ್ಪಕಲಾ ಶ್ರೀಮಂತಿಕೆ ಹೊಂದಿದ ಲಕ್ಕುಂಡಿ ಇತಿಹಾಸ ತಿಳಿಯಲು ಇಂಥ ಉತ್ಸವ ಸಹಕಾರಿಯಾಗಲಿದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.
ಎರಡು ದಿನಗಳ ಲಕ್ಕುಂಡಿ ಉತ್ಸವಕ್ಕೆ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಲಕ್ಕುಂಡಿ ಅಭಿವೃದ್ದಿ ಪ್ರಾದಿಕಾರ ಸ್ಥಾಪಿಸಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದ್ದು ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ಕೆ ಪಾಟೀಲ್ ಹೇಳಿದರು.
ಲಕ್ಕುಂಡಿ ಗ್ರಾಮದ ವಚನಕಾರ ಅಜಗಣ್ಣ ಮುಕ್ತಾಯಕ್ಕ ಸಮಾನಂತರ ವೇದಿಕೆಯಲ್ಲಿ ನಡೆದ ಗದಗ ಜಿಲ್ಲೆ ಇತಿಹಾಸ ಸಂಸ್ಕೃತಿ ಪರಂಪರೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಲಕ್ಕುಂಡಿ ಉತ್ಸವ ರಾಷ್ಟ್ರಮಟ್ಟದಲ್ಲಿ ಮಹತ್ವ ಪಡೆಯುವಂತಾಗಬೇಕು. ಸಾಹಿತ್ಯ, ಕಲೆ, ಸಂಗೀತ ಹಾಗೂ ರಾಜಕೀಯ ಎಲ್ಲ ಕ್ಷೇತ್ರಗಳಲ್ಲೂ ತನ್ನದೇಯಾದ ವಿಶಿಷ್ಟ ಛಾಪು ಮೂಡಿಸಿದ್ದು ಗದಗ ಜಿಲ್ಲೆ ಎಂದು ಸಚಿವ ಪಾಟೀಲ್ ಹೇಳಿದರು.
ಲಕ್ಕುಂಡಿ ಇತಿಹಾಸದ ಕುರಿತು ಸಂಶೋಧನೆ ನಡೆಸಲು ಸರ್ಕಾರಕ್ಕೆ 5 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ದಾನಚಿಂತಾಮಣಿ ಅತ್ತಿಮಬ್ಬೆಯು ಈ ಪ್ರದೇಶದಲ್ಲಿ ಜೀನ ಭವನಗಳನ್ನು ಸ್ಥಾಪನೆ ಮಾಡಿದ್ದಾರೆ. ಇಲ್ಲಿನ ಪ್ರತಿ ಕಲ್ಲುಗಳು ಕಥೆ ಹೇಳುತ್ತವೆ.
ನಂದರು, ಮೌರ್ಯರು, ಶಾತವಾಹನರು, ಹೊಯ್ಸಳರು, ಕದಂಬರು, ಆದಿಲ್ ಶಾಹಿಗಳು ಸೇರಿದಂತೆ ೨೮ ಅರಸು ಮನೆತನದವರು ಆಳಿದ್ದಾರೆ ಎಂದು ಹೇಳಿದರು.
ಮುಜರಾಯಿ ಇಲಾಖೆ ರುದ್ರಪ್ಪ ಲಮಾಣಿ ಹಾಗೂ ಇತರರು ಇದ್ದರು. ಮಂಗಳೂರಿನ ಮಂಗಳಾ ಮ್ಯಾಜಿಕ್ ವರ್ಲ್ಡ್ನ ಕಲಾವಿದರು ಪ್ರದರ್ಶಿಸಿದ ಮ್ಯಾಜಿಕ್ ಶೋ ಎಲ್ಲರನ್ನೂ ರಂಜಿಸಿತು. ಸರ್ಕಾರದ ಯೋಜನೆ ಪ್ರಚುರಪಡಿಸುವ ಲೇಸರ್ ಶೋ ಗಮನಸೆಳೆಯಿತು. ಸಂಗೀತ, ನೃತ್ಯ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವದ ಸಂಭ್ರಮ ಹೆಚ್ಚಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.