ಚೆನ್ನೈ: ತಮಿಳುನಾಡಿನ ಸಿ.ಎಂ ಗಾದಿಗಾಗಿ ಹರಸಾಹಸ ನಡೆಸಿದ್ದ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರಿಗೆ ಸುಪ್ರಿಂ ಶಿಕ್ಷೆ ವಿಧಿಸಿದ್ದನ್ನು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಶ್ಲಾಘಿಸಿದ್ದಾರೆ.
20 ವರ್ಷಗಳ ಹಿಂದೆ ಅಂದರೆ 1998 ರ ಜೂನ್ನಲ್ಲಿ ಜಯಲಲಿತಾ, ಶಶಿಕಲಾ ಹಾಗೂ ಇತರರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ದೂರು ದಾಖಲಿಸಿದ್ದರು.
ಆಗಿನಿಂದ ವಿವಿಧ ಹಂತಗಳಲ್ಲಿ ವಿಚಾರಣೆಗೆ ಒಳಪಡುತ್ತಲೇ ಬಂದಿದ್ದ ಪ್ರಕರಣ ಇಂದು ಸುಪ್ರೀಂನಲ್ಲಿ ಮತ್ತೆ ನಿರ್ಣಯವಾಗಿದೆ. ಶಶಿಕಲಾ ಹಾಗೂ ಇತರರು ಅಪರಾಧಿ ಎಂದು ತೀರ್ಮಾನವಾಗಿದ್ದು ಜೈಲುಶಿಕ್ಷೆ ಕಾಯಂ ಆಗಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ 20 ವರ್ಷಗಳ ನಂತರ ಗೆದ್ದಿರುವೆ ಎಂದು ಟ್ವೀಟ್ ಮಾಡಿದ್ದಾರೆ.
After 20 years I won. Now turn of TDK Buddhu PC BC & Tata to join in jail
— Subramanian Swamy (@Swamy39) February 14, 2017
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.