ನವದೆಹಲಿ: ಸಿಬಿಎಸ್ಇ ಬೋರ್ಡ್ ಪರೀಕ್ಷೆ ಸಂದರ್ಭ ಮಧುಮೇಹವುಳ್ಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಪರೀಕ್ಷೆಯ ನಡುವೆ ಉಪಹಾರಕ್ಕೆ ಅವಕಾಶ ಕಲ್ಪಿಸಲು ಸಿಬಿಎಸ್ಇ ಯೋಜಿಸುತ್ತಿದೆ.
ಮಂಡಳಿಯು ಶೀಘ್ರದಲ್ಲೇ 10ನೇ ಮತ್ತು 12ನೇ ವರ್ಗದ ವಿದ್ಯಾರ್ಥಿಗಳಿಗೆ ಲಘು ಉಪಹಾರಕ್ಕೆ ಅವಕಾಶ ಕಲ್ಪಿಸಲಿದೆ.
ದೆಹಲಿಯ ಮಧುಮೇಹ ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಅಶೋಕ್ ಝಿಂಗನ್ ಅವರು ನಡೆಸಿದ ಅಶ್ಯಯಗಳ ಫಲಿತಾಂಶದ ಬಳಿಕ ಈ ನಿರ್ಣಯ ಕೈಗೊಳ್ಳಲಾಗಿದೆ.
ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ಹೊರತುಪಡಿಸಿ ಸಾಮಾನ್ಯ ಶಾಲಾ ಸಮಯದಲ್ಲೂ ಈ ಪ್ರಕ್ರಿಯೆಯನ್ನು ಅಳವಡಿಸಲಿದೆ.
ಮಧುಮೇಹವವುಳ್ಳ ವಿದ್ಯಾರ್ಥಿಗಳು ಆಹಾರ ಸೇವಿಸಿದ ಅರ್ಧ ಗಂಟೆ ಬಳಿಕ ಇನ್ಸುಲಿನ್ ತೆಗೆದುಕೊಳ್ಳುವ ಅಗತ್ಯವಿದ್ದು, ಬೆಳಗ್ಗೆ 9ರಿಂದ 10 ಗಂಟೆ ನಡುವೆ ಆಹಾರ ಸೇವಿಸದಿದ್ದಲ್ಲಿ ಅವರ ದೇಹದಲ್ಲಿರುವ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಯ ಅರ್ಧದಲ್ಲಿ ಸಮಸ್ಯೆ ಎದುರಿಸಿ ಕೊಠಡಿ ಬಿಟ್ಟು ಹೊರನಡೆಯುತ್ತಾರೆ ಎಂದು ಡಾ. ಅಶೋಕ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.