ನವದೆಹಲಿ: ಸೂಕ್ತ ಶಿಕ್ಷಣವನ್ನು ನೀಡುವುದರಿಂದ ಉತ್ತಮ ಪ್ರಜೆಗಳನ್ನು ನಿರ್ಮಿಸಬಹುದು ಎಂದು ನಂಬಿರುವ ನಮ್ಮ ಸರ್ಕಾರ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಶೇಷ ಆದ್ಯತೆ ವಹಿಸುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ.
ಶಾಹ್ದಾರ ಕೇಂದ್ರೀಯ ವಿದ್ಯಾಲಯದಲ್ಲಿ ನೂತನ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಣ ಒದಗಿಸುವಿಕೆಯಲ್ಲಿ ಅಗತ್ಯವಾದ ಅಭಿವೃದ್ಧಿಪರ ಕೆಲಸಗಳು ಆದ್ಯತೆಯ ಮೇಲೆ ಆಗಬೇಕಿದೆ ಎಂದಿದ್ದಾರೆ.
ಕೇಂದ್ರೀಯ ವಿದ್ಯಾಲಯಗಳು ಉತ್ತಮ ಶಿಕ್ಷಣ ನೀಡುವಲ್ಲಿ ಹೆಸರಾಗಿದ್ದು, ಪೋಷಕರು ಕೇಂದ್ರೀಯ ವಿದ್ಯಾಲಯದಲ್ಲಿ ಮಕ್ಕಳನ್ನು ಸೇರಿಸಲು ಹೆಮ್ಮೆ ಪಡುತ್ತಾರೆ ಎಂದು ಸಚಿವ ಜಾವಡೇಕರ್ ಹೇಳಿದ್ದಾರೆ.
ಶಿಕ್ಷಣದ ಜೊತೆಗೇ ಕ್ರೀಡೆಯೂ ಮುಖ್ಯವಾಗಿದ್ದು, ಅದರ ಅಭಿವೃದ್ಧಿಗೂ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ. ಆಟದ ಮೈದಾನದಲ್ಲಿ ಬೆವರು ಸುರಿಸುವವನು ಉತ್ತಮ ವಿದ್ಯಾರ್ಥಿಯಾಗಬಲ್ಲ ಎಂದ ಅವರು, ದೈಹಿಕ ಶಿಕ್ಷಣಕ್ಕೂ ಪ್ರಾಶಸ್ತ್ಯ ನೀಡುವುದು ಅಗತ್ಯ ಎಂದರು.
ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಅಗತ್ಯವಾಗಿದ್ದ ಭೂಮಿಯ ವ್ಯಾಪ್ತಿಯಲ್ಲಿಯೂ ಕಡಿಮೆ ಮಾಡಲಾಗಿದೆ. ಮೆಟ್ರೊ ಸಿಟಿಗಳಲ್ಲಿ 4 ಎಕರೆ ಬದಲು 2.5 ಎಕರೆ, ಇನ್ನುಳಿದ ಕಡೆಗಳಲ್ಲಿ 8 ಎಕರೆ ಬದಲು 5 ಎಕರೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಈ ಬಾರಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಆನ್ಲೈನ್ನಲ್ಲೇ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಪೋಷಕರು ಪ್ರವೇಶಕ್ಕಾಗಿ ಶಾಲೆಗೆ ಹೋಗಿ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ ಎಂದು ಅವರು, ಕೇಂದ್ರೀಯ ವಿದ್ಯಾಲಯಗಳಲ್ಲಿ ಕೊರತೆ ಇರುವ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇಷ್ಟರಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಜಾವಡೇಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.