ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಯಾಗಿ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ತಯಾರಿ ಮಾಡುತ್ತಿದ್ದರೆ, ಇನ್ನೊಂದೆಡೆ ಅದೇ ಪಕ್ಷದ ಹಿರಿಯ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ರಾಹುಲ್ ಗಾಂಧಿ ಮನಸ್ಸಿನ್ನು ಪಕ್ವಗೊಂಡಿಲ್ಲ, ಅದಕ್ಕಾಗಿ ಇನ್ನಷ್ಟು ಸಮಯದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಶೀಲಾ ದೀಕ್ಷಿತ್ ಅವರು, ಸಮಾಜವಾದಿ ಪಕ್ಷದೊಂದಿಗೆ ತಮ್ಮ ಪಕ್ಷ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹಿಂದೆ ಸರಿದಿದ್ದರು. ಅಲ್ಲದೇ ಪಕ್ಷದ ಪರ ಪ್ರಚಾರಕ್ಕೂ ಅವರು ಬೆಂಬಲಿಸಲು ಮನಸ್ಸು ಮಾಡಿಲ್ಲ.
ಈ ಕುರಿತು ಟೈಮ್ಸ್ ಆಫ್ ಇಂಡಿಯಾಕ್ಕೆ ಪ್ರತಿಕ್ರಿಯಿಸಿರುವ ಅವರು, ಪಕ್ಷದ ಪರ ಪ್ರಚಾರವನ್ನು ನಾನು ನಿಲ್ಲಿಸಿಲ್ಲ. ಮೈತ್ರಿ ಕುರಿತು ಆರಂಭದಲ್ಲಿ ಗೊಂದಲಗಳಿದ್ದವು. ಈಗ ಎಲ್ಲವಕ್ಕೂ ಪರಿಹಾರ ಸಿಕ್ಕಿದೆ. ಆಗಾಗ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಜನ ಬೆಂಬಲಿಸುವುದಿಲ್ಲ. ಮುಸ್ಲಿಂರು ಹಾಗೂ ದಲಿತರು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಎಸ್ಪಿ ಮೈತ್ರಿಯನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.