ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆತಯಲಿದೆ. ಉತ್ತರ ಪ್ರದೇಶದಲ್ಲಿ ಒಂದು ಬಲಿಷ್ಠ ಸರ್ಕಾರವನ್ನು ನಾವು ಬಯಸುತ್ತಿದ್ದೇವೆ. ಬಿಜೆಪಿ ಯಾವುದೇ ಮೈತ್ರಿ ಇಲ್ಲದೇ ಬಹುಮತ ಪಡೆಯಲಿದೆ. ಈ ಚುನಾವಣೆಯಲ್ಲಿ ಸಮಾಜವಾದಿ-ಕಾಂಗ್ರೆಸ್ ಮೈತ್ರಿ ಬಹಳ ಹಿಂದುಳಿದಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷ ಆಡಳಿತದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ ಹಿಂದುಳಿದಿದೆ. ಇದರಿಂದ ಕಂಗೆಟ್ಟಿರುವ ಜನರು ಬಿಜೆಪಿಗೆ ಮತ ಹಾಕಲು ನಿರ್ಧರಿದ್ದಾರೆ. ಬಿಜೆಪಿ ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಪರ ಆಡಳಿತ ನಡೆಸಲಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸದೇ ಇರುವುದು ನಮ್ಮ ತಂತ್ರವಾಗಿದೆ. ಇದು ಪಕ್ಷದ ದೌರ್ಬಲ್ಯವಲ್ಲ. ನಾವು ಈ ಹಿಂದೆಯೂ ಇತರ ರಾಜ್ಯಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳ ಘೋಷಣೆಯನ್ನು ಮಾಡಿರಲಿಲ್ಲ. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಲ್ಲಿ, ಯುಪಿ ಮುಖ್ಯಮಂತ್ರಿ ಆಗುವ ವ್ಯಕ್ತಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರಿಗಿಂತ ಉತ್ತಮ ಆಡಳಿತ ನಡೆಸಲಿದ್ದಾರೆ ಎಂದು ಶಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.