ಮುಂಬಯಿ: ಬೃಹನ್ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಅತ್ಯುತ್ತಮ ಪ್ರದರ್ಶನ ಪಕ್ಷದ ಪಾರದರ್ಶಕತೆಯ ಅಜೆಂಡಾವನ್ನು ಬಿಂಬಿಸುತ್ತದೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಮುಂಬಯಿಯ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದೊಂದು ಅಭೂತಪೂರ್ವ ಗೆಲುವು. ಬಿಎಂಸಿ ಚುನಾವಣೆಯಲ್ಲಿ ಅದ್ಭುತ ಪ್ರತಿಕ್ರಿಯೆ ಪಡೆದಿದ್ದೇವೆ. ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ನಮ್ಮ ಅಜೆಂಡಾವನ್ನು ಜನರು ಸ್ವೀಕರಿಸಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ ಫಡ್ನವಿಸ್, ಈ ಗೆಲುವು ಪ್ರಧಾನಿಯವರ ನಾಯಕತ್ವದ ಪರಿಣಮವಾಗಿದೆ. ಮುಂಬಯಿ ಬಿಜೆಪಿಗೆ ಮತ ಹಾಕಿರುವುದು ಮತದಾರರು ಪ್ರಧಾನಿ ಮತ್ತು ಬಿಜೆಪಿ ಮೇಲೆ ಇಟ್ಟುಕೊಂಡಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಇದು ಅನಾಣ್ಯೀಕರಣದ ಜಯವಾಗಿದೆ. ಇದು ಕಪ್ಪು ಹಣ ಮತ್ತು ಭ್ರಷ್ಟಾಚಾರವನ್ನು ಅಂತ್ಯಗೊಳಿಸುವ ನಡೆಯಾಗಿತ್ತು. ಈ ಫಲಿತಾಂಶಗಳು ಮೋದಿಜೀ ಅವರ ಆಡಳಿತದಲ್ಲಿ ಜನರು ಇಟ್ಟಿರುವ ನಂಬಿಕೆ ಎಂದು ಸಾಬೀತಾಗಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.