ಜಶ್ಪುರ್: ದೇಶದ ಇತರರಿಗೆ ಉದಾಹರಣೆಯಂತೆ ಛತ್ತೀಸ್ಗಢದ ಜಶ್ಪುರ್ ಜಿಲ್ಲೆಯ ಮಹಿಳೆಯೊಬ್ಬಳು ಗ್ರಾಮದಲ್ಲಿ 100ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲು ತನ್ನ ಸ್ವಂತ ಚಿನ್ನಾಭರಣಗಳನ್ನು ಅಡವಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಸ್ಪೂರ್ತಿ ಪಡೆದ ಕಾಜಲ್ ರಾಯ್, ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟ ಮಹಿಳೆ.
ಜಶ್ಪುರ್ ಜಿಲ್ಲೆಯ ಸನಾ ಗ್ರಾಮದ ಸರಪಂಚ್ ಆಗಿರುವ ಕಾಜಲ್ ರಾಯ್ ತಮ್ಮ ವಾರ್ಡ್ನಲ್ಲಿ ಆರಂಭಿಕ ಹಂತದಲ್ಲಿ 50 ಶೌಚಾಲಯಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದ್ದು, ಇನ್ನಷ್ಟು ಶೌಚಾಲಯಗಳ ನಿರ್ಮಾಣಕ್ಕೆ ನಿಧಿಯ ಕೊರತೆಯಿಂದಾಗಿ ಆಭರಣಗಳನ್ನು ಅಡವು ಇಟ್ಟಿದ್ದಾರೆ. ಶೌಚಾಲಯ ನಿರ್ಮಾಣ ಹೆಚ್ಚು ಮುಖ್ಯವಾದುದರಿಂದ ಇನ್ನಷ್ಟು ಶೌಚಾಲಯಗಳನ್ನು ನಿರ್ಮಿಸಲು ಸ್ವಲ್ಪ ಚಿನ್ನಾಭರಣಗಳನ್ನು ಮಾರಾಟ ಮಾಡಿರುವುದಾಗಿ ಕಾಜಲ್ ತಿಳಿಸಿದ್ದಾರೆ.
ಕಾಜಲ್ ಅವರು ವಾರ್ಡ್ನ ಪ್ರತಿ ಮನೆಗೆ ತೆರಳಿ, ಕುಟುಂಬದ ಜನರಿಗೆ ಶೌಚಾಲಯ ಬಳಕೆ ಮತ್ತು ಅದರ ಪ್ರಾಮುಖ್ಯತೆ ಬಗ್ಗೆ ಜಾಗೃತಿ ಮುಡಿಸಿದ್ದಾರೆ.
ಕಾಜಲ್ ಅವರು ಇದಕ್ಕೆ ಸ್ಫೂರ್ತಿಯಾಗಿದ್ದು, ಈ ಅಭಿವೃದ್ಧಿ ಕಾರ್ಯಕ್ಕಾಗಿ ಅವರನ್ನು ಸನ್ಮಾನಿಸಲಾಗುವುದು. ಜಿಲ್ಲಾಡಳಿತ ಅವರಿಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಶುಕ್ಲಾ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 2014ರಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.