ನವದೆಹಲಿ: ಈ ಬಾರಿಯ ಬೇಸಿಗೆ ಬಿಸಿಲು ತೀವ್ರವಾಗಿರಲಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಈಗಾಗಲೇ ತಜ್ಞರುಗಳು ಅಭಿಪ್ರಾಯಿಸಿದ್ದಾರೆ. ಮಾರ್ಚ್ನಿಂದ ಮೇ ತಿಂಗಳವರೆಗಿನ ಸೂರ್ಯನ ಪ್ರತಾಪ ದೇಶದ ಪ್ರವಾಸೋದ್ಯಮದ ಮೇಲೂ ತೀವ್ರ ಪೆಟ್ಟು ಕೊಡಲಿದೆ ಎಂದು ಹೇಳಲಾಗುತ್ತಿದೆ.
ದೇಶ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಉಷ್ಣತೆ ಏರಿಕೆಯಾಗಲಿದ್ದು, ಇದರಿಂದ ವಿವಿಧ ಪ್ರವಾಸೋದ್ಯಮ ತಾಣಗಳು ಬಿಕೋ ಎನ್ನುವ ಪರಿಸ್ಥಿತಿಗೆ ಬರಲಿದೆ. ಅದರಲ್ಲೂ ಬಹುತೇಕ ಹಿಲ್ ಸ್ಟೇಷನ್ಗಳು ಈ ಬಾರಿ ಪ್ರವಾಸಿಗರ ಕೊರತೆಯನ್ನು ಎದುರಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ತಂಪಾದ ಪ್ರದೇಶಗಳೆಂದು ಗುರುತಿಸಿಕೊಂಡಿರುವ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರಗಳಲ್ಲೂ ಈ ಬಾರಿ ಉಷ್ಣತೆ 1 ಡಿಗ್ರಿ ಸೆಂಟಿಗ್ರೇಡ್ನಷ್ಟು ಏರಿಕೆಯಾಗಲಿದೆ ಎನ್ನಲಾಗಿದ್ದು, ಜಾಗತಿಕ ವಿಷಯವಾಗಿರುವ ಹವಮಾನ ವೈಪರೀತ್ಯವೇ ಇದಕ್ಕೆ ಕಾರಣವಾಗಿದೆ.
ಕಳೆದ ವರ್ಷವೇ ಬಿಸಿಲ ಪ್ರತಾಪಕ್ಕೆ ದೇಶದಾದ್ಯಂತ 1,600 ಮಂದಿ ಪ್ರಾಣ ಕಳೆದುಕೊಂಡಿದ್ದರು, ಇದರ ಅರ್ಧದಷ್ಟು ಸಾವು ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲೇ ಸಂಭವಿಸಿತ್ತು. ಈ ವರ್ಷ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಆತಂಕ ಎದುರಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.