ಕಥಕ್: ದೇಶದಲ್ಲಿ 500.ರೂ ಮತ್ತು 1000.ರೂ ಮುಖಬೆಲೆಯ ನೋಟುಗಳು ನಿಷೇಧವಾದ ಬಳಿಕ ಇದುವರೆಗೆ 70 ಸಾವಿರ ಕೋಟಿ ಕಪ್ಪುಹಣವನ್ನು ಪತ್ತೆ ಮಾಡಲಾಗಿದೆ ಮತ್ತು ಈ ಬಗ್ಗೆ ಆರನೇ ವರದಿಯನ್ನು ಎಪ್ರಿಲ್ ತಿಂಗಳಲ್ಲಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಿದ್ದೇವೆ ಎಂದು ಕಪ್ಪುಹಣದ ತನಿಖೆಗೆ ಸುಪ್ರೀಂಕೋರ್ಟ್ ನಿಯೋಜಿಸಿದ ಎಸ್ಐಟಿಯ ಉಪಾಧ್ಯಕ್ಷ ನ್ಯಾ.ಅರಿಜಿತ್ ಪಸಯತ್ ತಿಳಿಸಿದ್ದಾರೆ.
ಆರ್ಥಿಕ ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿರುವ ಸರ್ಕಾರದ ವಿವಿಧ ಏಜೆನ್ಸಿಗಳೊಂದಿಗೆ ಮಾತುಕತೆ ನಡೆಸಿ ಎಪ್ರಿಲ್ ತಿಂಗಳ ಮೊದಲ ವಾರದಲ್ಲಿ ಕಪ್ಪುಹಣದ ತನಿಖೆಯ ಆರನೇ ಮಧ್ಯಂತರ ವರದಿಯನ್ನು ಸುಪ್ರೀಂಗೆ ಸಲ್ಲಿಸುತ್ತೇವೆ ಎಂದು ಪಸಯತ್ ಹೇಳಿದ್ದಾರೆ.
ಎಸ್ಐಟಿಯು ಕಳೆದ ಎರಡು ವರ್ಷಗಳಿಂದ ತನ್ನ ಮಧ್ಯಂತರ ವರದಿಗಳಲ್ಲಿ ಕಪ್ಪುಹಣದ ತಡೆಯುವಿಕೆಗೆ ಹಲವಾರು ಶಿಫಾರಸುಗಳನ್ನು ಮಾಡಿದೆ. ಅದರಲ್ಲಿ ಹಲವಾರು ಶಿಫಾರಸ್ಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ, ಕೆಲವು ಇನ್ನೂ ಪರಿಶೀಲನೆಯಲ್ಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.