ಶ್ರೀನಗರ: ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಮನೆಯೊಂದರೊಳಗೆ ಅವಿತಿರುವ ಉಗ್ರರನ್ನು ಸದೆಬಡಿಯಲು ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈಗಾಗಲೇ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಇವರು ಲಷ್ಕರ್-ಇ-ತೋಯ್ಬಾ ಸಂಘಟನೆಗೆ ಸೇರಿದವರು ಎನ್ನಲಾಗಿದ್ದು, ಒರ್ವನನ್ನು ಜಹಂಗೀರ್ ಅಹ್ಮದ್ ಗನಯಿ, ಮತ್ತೋರ್ವನನ್ನು ಮೊಹಮ್ಮದ್ ಶಫಿ ಶೇರ್ಗುಜರಿ ಎಂದು ಗುರುತಿಸಲಾಗಿದೆ.
ಉಗ್ರರು ನೆಲೆಸಿರುವ ಖಚಿತ ಮಾಹಿತಿಯ ಮೇರೆಗೆ ಇಂದು ಮುಂಜಾನೆ 2.30ರ ಸುಮಾರಿಗೆ ಭದ್ರತಾ ಪಡೆಗಳು ಅವಂತಿಪೋರದ ಪದ್ಗಂಪೋರದಲ್ಲಿ ಕಾರ್ಯಾಚರಣೆ ಆರಂಭಿಸಿದವು, ಮೂಲಗಳ ಪ್ರಕಾರ 4.30ರ ಸುಮಾರಿಗೆ ಉಗ್ರರು ಯೋಧರ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಇದಕ್ಕೆ ಪ್ರತ್ಯುತ್ತರ ಎಂಬಂತೆ ಯೋಧರು ಇಬ್ಬರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ಬಳಿಕ ಉಗ್ರರು ಅವಿತು ಕುಳಿತಿದ್ದ ಮನೆಯ ಸಮೀಪ ಕಾರ್ಯಾಚರಣೆ ಆರಂಭಗೊಂಡಿದ್ದು, ಮನೆಯೊಳಗೆ ಇಬ್ಬರು ಉಗ್ರರಿದ್ದಾರೆ ಎನ್ನಲಾಗಿದೆ. ಮನೆಯೊಳಗಿರುವ ಉಗ್ರನ ತಾಯಿ ಶರಣಾಗುವಂತೆ ವಿನಂತಿಸುತ್ತಿದ್ದು ಉಗ್ರ ಇದಕ್ಕೆ ನಿರಾಕರಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಉಗ್ರರ ದಾಳಿಯ ಭೀತಿಯಿಂದ ಬನಿಹಲ್ ಮತ್ತು ಶ್ರೀನಗರ ನಡುವಣ ರೈಲು ಸಂಪರ್ಕವನ್ನು ಕಡಿತಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.