ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲೋಕಸಭೆಗೆ ಶನಿವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ‘106 ಇದ್ದ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಇದೀಗ 68ಕ್ಕೆ ಇಳಿಕೆಯಾಗಿದೆ’ ಎಂದಿದ್ದಾರೆ.
68 ಜಿಲ್ಲೆಗಳ ಪೈಕಿ ಆಂಧ್ರಪ್ರದೇಶ, ಬಿಹಾರ, ಛತ್ತೀಸ್ಗಢ, ತೆಲಂಗಾಣ, ಮಹಾರಾಷ್ಟ್ರದಲ್ಲಿನ 35 ಜಿಲ್ಲೆಗಳು ತೀವ್ರವಾಗಿ ನಕ್ಸಲ್ ಬಾಧೆಗೊಳಪಟ್ಟಿದೆ ಎಂದಿದ್ದಾರೆ.
ಮುಂದೆಯೂ ನಕ್ಸಲ್ ಪೀಡಿತ ರಾಜ್ಯಗಳ ಸಂಖ್ಯೆ ಇಳಿಮುಖವಾಗುತ್ತದೆ, ಈ ರಾಜ್ಯಗಳೊಂದಿಗೆ ಕೇಂದ್ರ ರಕ್ಷಣಾಪಡೆ, ಇಂಟೆಲಿಜೆನ್ಸ್ ಹಂಚಿಕೆ ಮಾತ್ರವಲ್ಲ ಹಣಕಾಸು ನೆರವನ್ನೂ ನೀಡುತ್ತದೆ ಎಂದಿದ್ದಾರೆ.
ಅಲ್ಲದೇ ಈ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನೂ ಕೇಂದ್ರದ ವತಿಯಿಂದ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.