ಹೈದರಾಬಾದ್: ಮೂರು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದ ಸ್ವಾಮಿ ಅಸೀಮಾನಂದ ಶುಕ್ರವಾರ ಹೈದರಾಬಾದ್ ಜೈಲಿನಿಂದ ಬಿಡುಗಡೆಗೊಳ್ಳಲಿದ್ದಾರೆ.
2007ರ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯ ಇವರಿಗೆ ಜಾಮೀನು ಮಂಜೂರು ಮಾಡಿತ್ತು, ಈ ಹಿನ್ನಲೆಯಲ್ಲಿ ಅವರಿಂದು ಜೈಲಿನಿಂದ ಹೊರಕ್ಕೆ ಬರಲಿದ್ದಾರೆ.
ಆದರೆ ನಗರ ಬಿಟ್ಟು ಹೊರಕ್ಕೆ ಹೋಗದಂತೆ ಅವರಿಗೆ ಸೂಚನೆ ನೀಡಲಾಗಿದೆ, ಅಲ್ಲದೇ ತಲಾ ೫೦ ಸಾವಿರಗಳ ಎರಡು ಶೂರಿಟಿಗಳನ್ನು ಇಡುವಂತೆ ಆದೇಶಿಸಿದೆ.
9 ಜನರನ್ನು ಬಲಿತೆಗೆದುಕೊಂಡ 2007ರ ಮೇ 18ರಂದು ನಡೆದ ಮೆಕ್ಕಾ ಸಮೀದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 2010ರ ನಂ.19ರಂದು ಇವರನ್ನು ಹರಿದ್ವಾರದಲ್ಲಿ ಬಂಧಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.