ಗದಗ: ಉತ್ತರ ಕರ್ನಾಟಕ ಬಹು ಮಹತ್ವದ ಯೋಜನೆಯಾದ ಮಹದಾಯಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿ ವಿವಿಧ ಮಠಾಧೀಶರು ನರಗುಂದದಲ್ಲಿ ಪಾದಯಾತ್ರೆ ಮೂಲಕ ರೈತರಿಗೆ ಬೆಂಬಲ ನೀಡಿದರು.
ಮಹದಾಯಿ ವಿವಾದವನ್ನು ಬಗೆಹರಿಸುವಂತೆ ಆಗ್ರಹಿಸಿ ಕಳೆದ ಅಂದಾಜು ಒಂದೂವರೆ ವರ್ಷದಿಂದ ನರಗುಂದದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ತಾಲ್ಲೂಕುಗಳಿಂದ ಮಹಿಳೆಯರು, ರೈತರು ಚಕ್ಕಡಿಗಳ ಮೂಲಕ ಆಗಮಿಸಿ, ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಂದಿನ ಹೋರಾಟದ ರೂಪರೇಷೆಗಳ ಕುರಿತು ಚರ್ಚಿಸಿ, ಬಸವ ಜಯಂತಿಯ ನಂತರ ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.
ನಿಮ್ಮೊಂದಿಗೆ ನಾವು ಸದಾ ಇರುತ್ತೇವೆ. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ನಿರಂತರ. ಎದೆಗುಂದದೇ ರೈತರು ಹೋರಾಟ ಮುಂದುವರೆಸಲಿ. ಅವರ ಬೆನ್ನಿಗೆ ನಾವಿರುತ್ತೇವೆ ಎಂದು ಮಠಾಧೀಶರು ಭರವಸೆ ನೀಡಿದರು.
ಶಾಂತಲಿಂಗ ಮಹಾಸ್ವಾಮಿಗಳು, ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು, ತೋರಗಲ್ಲ ಗಚ್ಚಿನ ಹಿರೇಮಠದ ಚನ್ನಮಲ್ಲ ಸ್ವಾಮಿಗಳು, ಬಸವಲಿಂಗ ಮಹಾಸ್ವಾಮಿಗಳು, ಧಾರವಾಡ ಮನಸೂರ ಮಠದ ಬಸವರಾಜ ದೇವರು, ರಾಜ್ಯ ರೈತ ಸೇನೆ ಅಧ್ಯಕ್ಷ ವೀರೇಶ, ಸೊಬರದ ಮಠ ಸ್ವಾಮಿಗಳು, ಪರಶುರಾಮ ಜಂಬಗಿ, ವೀರಬಸಪ್ಪ ಹೂಗಾರ, ಚಂದ್ರಗೌಡ ಪಾಟೀಲ, ಫಕೀರಪ್ಪ ಜೋಗನ್ನವರ, ಶ್ರೀಶೈಲ್ ಮೇಟಿ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.