ನವದೆಹಲಿ: ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇದೀಗ ಮೃತ ಸೈನಿಕರ ಕುಟುಂಬಕ್ಕೆ ಆರ್ಥಿಕ ನೆರವು ಸಿಗುವಂತೆ ಮಾಡುವ ಮಹತ್ಕಾರ್ಯವೊಂದನ್ನು ಮಾಡಿದ್ದಾರೆ.
ಹುತಾತ್ಮರ ಕುಟುಂಬಗಳನ್ನು ಜನರು ನೇರವಾಗಿ ಸಂಪರ್ಕಿಸಲು ಸಾಧ್ಯವಾಗುವಂತಹ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್ಸೈಟ್ನ್ನು ಆರಂಭಿಸುವಂತೆ ಅಕ್ಷಯ್ ಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿದ್ದರು, ಇದೀಗ ಅವರ ಸಲಹೆಗೆ ಕೇಂದ್ರ ಸರ್ಕಾರ ಅನುಮೋದನೆಯನ್ನೂ ನೀಡಿದೆ.
ಕೇಂದ್ರ ‘ಭಾರತ್ ಕೆ ವೀರ್’ ಎಂಬ ಅಪ್ಲಿಕೇಶನನ್ನು ವಿನ್ಯಾಸಪಡಿಸಸಲು ಮುಂದಾಗಿದ್ದು, ಶೀಘ್ರದಲ್ಲೇ ಸಚಿವರಾದ ರಾಜನಾಥ್ ಸಿಂಗ್, ಕಿರಣ್ ರಿಜ್ಜು ಮತ್ತು ಅಕ್ಷಯ್ ಕುಮಾರ್ ಜೊತೆಯಾಗಿ ಈ ಅಪ್ಲಿಕೇಶನನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಹುತಾತ್ಮ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಬಯಸುವವರಿಗೆ ಈ ಅಪ್ಲಿಕೇಶನ್ ಸಹಕಾರಿಯಾಗಲಿದೆ. ಇದರ ಮೂಲಕ ಗರಿಷ್ಠ 15 ಲಕ್ಷ ರೂಪಾಯಿಗಳನ್ನು ಹುತಾತ್ಮರ ಕುಟುಂಬದವರ ಅಕೌಂಟ್ ನಂಬರ್ಗೆ ವರ್ಗಾಯಿಸಬಹುದಾಗಿದೆ.
ಸ್ಟೈಲ್ ಟಿಪ್ಸ್, ಮೇಕ್ ಅಪ್ ಟಿಪ್ಸ್, ಫಿಟ್ನೆಸ್ ಟಿಪ್ಸ್ ಕೊಡುವ ನಟ-ನಟಿಯರನ್ನು ನಾವು ಕಾಣುತ್ತೇವೆ, ಆದರೆ ಅಕ್ಷಯ್ ಇದಕ್ಕೂ ಹೊರತಾಗಿ ಹುತಾತ್ಮ ಯೋಧರ ಕುಟುಂಬಗಳನ್ನು ಆರ್ಥಿಕವಾಗಿ ಸಬಲಗೊಳಿಸುವ ಸಲಹೆಯನ್ನು ನೀಡಿ ಸರ್ಕಾರ, ಜನರಿಂದ ಭೇಷ್ ಎನಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.