ಚೆನ್ನೈ: ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಆಡಳಿತದಲ್ಲಿರುವ ಶಶಿಕಲಾ ಬಣದ ಎಐಎಡಿಎಂಕೆ ಸದಸ್ಯರುಗಳು ಓ.ಪನ್ನೀರಸೆಲ್ವಂ ಬಳಗವನ್ನು ಸೇರುವ ಸಾಧ್ಯತೆಗಳು ದಟ್ಟವಾಗಿದೆ.
ಮುಖ್ಯಸ್ಥೆ ಶಶಿಕಲಾ ಮತ್ತು ಆಕೆಯ ಸಂಬಂಧಿ ಟಿಟಿವಿ ದಿನಕರಣ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಎಐಎಡಿಎಂಕೆ ಪಕ್ಷದ ಬಹಳಷ್ಟು ಸಚಿವರುಗಳು ಮತ್ತು ಶಾಸಕರುಗಳು ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಮಂಗಳವಾರ ಓ.ಪನ್ನೀರಸೆಲ್ವಂ ಬಣ ಮತ್ತು ಶಶಿಕಲಾ ಬಣದ ಸದಸ್ಯರುಗಳು ವಿಲೀನಗೊಳ್ಳುವ ಬಗ್ಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.
ಎಐಎಡಿಎಂಕೆಯ ಮೂಲ ಎರಡು ಎಲೆಗಳ ಮೂಲ ಚಿಹ್ನೆಯನ್ನು ಪಡೆಯುವುದಕ್ಕಾಗಿ ದಿನಕರಣ್ ಅವರು ಚುನಾವಣಾ ಆಯೋಗಕ್ಕೆಯೇ ಲಂಚ ಕೊಡಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಈಗಾಗಲೇ ಮಧ್ಯವರ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ತನಿಖೆಗೊಳಪಡಿಸಿದ್ದಾರೆ.
ಶಶಿಕಲಾ ಜೈಲಿನಿಂದಲೇ ಪಕ್ಷವನ್ನು ನಿಯಂತ್ರಿಸುತ್ತಿದ್ದು, ದಿನಕರಣ್ ಲಂಚದ ಆರೋಪಕ್ಕೆ ಒಳಗಾಗಿದ್ದಾರೆ. ಇದು ಅವರ ಬಣದ ಸದಸ್ಯರನ್ನು ಕೆರಳಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.