ಜಬಲ್ಪುರ್: 2016ರ ಡಿಸೆಂಬರ್ 11ರಂದು ಆರಂಭಗೊಂಡ ‘ನಮಾಮಿ ದೇವಿ ನರ್ಮದೆ-ಸೇವಾ ಯಾತ್ರ’ ಅಭಿಯಾನ ಮುಂದಿನ ತಿಂಗಳು ಅಂತ್ಯಗೊಳ್ಳಲಿದೆ.
ಈ ಅಭಿಯಾನದ ಸಮಾರೋಪ ಸಮಾರಂಭವು ಮೇ 11 ರಂದು ನರ್ಮದೆಯ ಉಗಮ ಸ್ಥಳ ಮಧ್ಯಪ್ರದೇಶದ ಅಮರ್ಕಾಂತಕ್ನಲ್ಲಿ ಜರುಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸಲಿದ್ದಾರೆ.
ಈ ವೇಳೆ ಹಲವು ಗಿಡಗಳನ್ನು ನರ್ಮದೆಯ ತಟದಲ್ಲಿ ನೆಡಲಾಗುತ್ತದೆ ಮತ್ತು ಇದರ ರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌವ್ಹಾಣ್ ಹೇಳಿದ್ದಾರೆ.
ನರ್ಮದೆಯ ಸಂರಕ್ಷಣೆ, ಮಾಲಿನ್ಯ ಮುಕ್ತಗೊಳಿಸುವ ಸಲುವಾಗಿ ಜನಸಮೂಹಕ್ಕೆ ಅರಿವು ಮೂಡಿಸಲು ಈ ಅಭಿಯಾನವನ್ನು ಆರಂಭಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.