ನವದೆಹಲಿ: ಶುಂಗ್ಲು ವರದಿಯ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಗುರುವಾರ ಪ್ರಕರಣವನ್ನು ದಾಖಲು ಮಾಡಿದೆ.
ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಖೇನ್ ಅವರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.
ಕೇಜ್ರಿವಾಲ್ ಸಾಕಷ್ಟು ಅಕ್ರಮಗಳನ್ನು ಎಸಗಿದ್ದಾರೆ ಎಂದು ಶುಂಗ್ಲು ವರದಿ ತಿಳಿಸಿದೆ, ಮಾಹಿತಿ ಹಕ್ಕು ಕಾಯ್ದೆಯಡಿ ನಾನು ಸಲ್ಲಿಸಿದ ಅರ್ಜಿಯಿಂದಾಗಿಯೂ ಅವರ ಅಕ್ರಮಗಳು ಬಹಿರಂಗಗೊಂಡವು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇನೆ ಎಂದು ಮಖೇನ್ ಹೇಳಿಕೊಂಡಿದ್ದಾರೆ.
ರಾಷ್ಟ್ರಪತಿ ಬಳಿಗೂ ಈ ವಿಷಯವನ್ನು ನಾವು ಕೊಂಡೊಯ್ದಿದ್ದೇವೆ. ಪೊಲೀಸರು ಕ್ರಮ ಜರುಗಿಸದಿದ್ದರೆ, ನಾವು ನ್ಯಾಯಾಂಗದ ಮೊರೆ ಹೋಗುತ್ತೇವೆ. ಸಿಬಿಐಗೂ ವರದಿ ಕಳುಹಿಸುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.