ಮಂಡ್ಯ: ವೇದಿಕೆ ಮೇಲೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲೆಂದು ಸಿದ್ದರಾಮಯ್ಯ ಬಂದಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇದರಿಂದ ಸಿದ್ದರಾಮಯ್ಯನವರು ಮುಜುಗುರಕ್ಕೊಳಗಾದಂತೆ ಕಂಡುಬಂದರು.
ಸಮಾರಂಭದ ವೇದಿಕೆಗೆ ಪೊಲೀಸ್ ಅಧಿಕಾರಿಯನ್ನು ಕರೆಸಿಕೊಂಡ ಅವರು, ಭದ್ರತಾ ವ್ಯವಸ್ಥೆಯ ವೈಫಲ್ಯದಿಂದಲೇ ಈ ರೀತಿಯಾಯಿತು. ಏನ್ ಕೆಲ್ಸಾ ಮಾಡ್ತೀರಾ ಎಂದು ಗದರಿಸಿದ ಪ್ರಸಂಗ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.