ಜಾನ್ಸಿ: ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದಾದರು ಲೋಪದೋಷ ಕಂಡು ಬಂದರೆ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬುಂದೇಲ್ಕಂಡ್ಗೆ ಸಿಎಂ ಆದ ಬಳಿಕ ಮೊದಲ ಭೇಟಿ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯದಲ್ಲಿ ಲೋಪ ಕಂಡುಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಅದರ ಮಾಹಿತಿ ನೀಡಿ, ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬೇಡಿ ಎಂದು ನೆರೆದಿದ್ದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬರಪೀಡಿತ ಬುಂದೇಲ್ಖಂಡ್ನ ನೀರಾವರಿ ಯೋಜನೆಗಳ ಕಾರ್ಯವನ್ನು ಸದಾ ಪರಿಶೀಲಿಸಿ ಅದರ ವರದಿಯನ್ನು ಸಂಬಂಧಿತ ಸಚಿವಾಲಯಗಳಿಗೆ ಸಮಯಕ್ಕೆ ಸರಿಯಾಗಿ ತಲುಪಿಸಿ ಎಂದ ಅವರು, ಇದರಿಂದ ಸರ್ಕಾರದ ಕಾರ್ಯವೂ ಉತ್ತಮಗೊಳ್ಳುತ್ತದೆ ಎಂದರು.
ವಿರೋಧಪಕ್ಷದ ಸ್ಥಾನದಲ್ಲಿದ್ದಾಗ ಧರಣಿ, ಪ್ರತಿಭಟನೆ ನಡೆಸುತ್ತಿದ್ದೆವು, ಇದೀಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಸರ್ಕಾರದ ಯೋಜನೆಗಳನ್ನು ಜನಪ್ರಿಯಗೊಳಿಸುವುದು ನಮ್ಮ ಕರ್ತವ್ಯ ಎಂದು ಕಾರ್ಯಕರ್ತರಿಗೆ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.