ನವದೆಹಲಿ: ಆಡಳಿತದ ದಕ್ಷತೆಗೆ ಅಧಿಕಾರಿಗಳ ಕಾರ್ಯಕ್ಷಮತೆ ಅವಶ್ಯ. ಅವರ ಸೇವೆ ಶ್ಲಾಘನೀಯ ಎಂದು ಪ್ರಧಾನಿ ಮೋದಿ ಬೆನ್ನು ತಟ್ಟಿದರೆ, ಇನ್ನೊಂದೆಡೆ ಸಿ.ಎಂ.ಸಿದ್ದರಾಮಯ್ಯನವರು ಏನ್ ಕೆಲ್ಸಾ ಮಾಡ್ತೀರಾ ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ನಾಗರಿಕ ಸೇವಾ ದಿನ. ನವದೆಹಲಿಯಲ್ಲಿ ದಕ್ಷ ಅಧಿಕಾರಿಗಳಿಗೆ ಸನ್ಮಾನಿಸುವ ಮೂಲಕ ಪ್ರಧಾನಿ ಮೋದಿ ಅವರು, ಪರಿವರ್ತನೆಯ ಕನಸನ್ನು ಅಧಿಕಾರಿಗಳ ಹೃದಯದಲ್ಲಿ ಬಿತ್ತಲು ಪ್ರಯತ್ನಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಗುರುವಾರವಷ್ಟೇ ಬಂದಿದ್ದ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೋಪಗೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಾರ್ವಜನಿಕ ಸಭೆಯಲ್ಲಿ ವೇದಿಕೆ ಮೇಲೆಯೇ ಕರೆದು ಲೆಫ್ಟ್ ರೈಟ್ ತೆಗೆದುಕೊಂಡಿದ್ದಾರೆ. ಕಾರಣ ಇಷ್ಟೇ, ಬಿಜೆಪಿಯವರು ಪ್ರತಿಭಟನೆ ಮಾಡಿದ್ದಕ್ಕೆ ಮುಖ್ಯಮಂತ್ರಿಯವರಿಗೆ ಮುಜುಗುರವಾಗಿತ್ತಂತೆ. ಭದ್ರತಾ ವೈಫಲ್ಯವಾಗಿತ್ತಂತೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯ ಮುಖಂಡ ಎಸ್.ಪ್ರಕಾಶ್, ಈ ರೀತಿ ಆಡಳಿತಾರೂಢ ಪಕ್ಷದ ವಿರುದ್ಧ ಸಿದ್ದರಾಮಯ್ಯನವರು ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೂ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕಿದೆ ಎಂದಿದ್ದಾರೆ.
ಇಲ್ಲಿ ಓರ್ವ ಪೊಲೀಸ್ ಅಧಿಕಾರಿ ತಮ್ಮ ಕಾರ್ಯವನ್ನು ತಾವು ಮಾಡಿದ್ದಾರೆ. ಮುಖ್ಯಮಂತ್ರಿಗಳು ಅದಕ್ಕೇಕೆ ಸಹನೆ ಕಳೆದುಕೊಳ್ಳಬೇಕು? ಬಹುಶಃ ಅವರಿಗೆ ಬಿಜೆಪಿಯ ಪ್ರತಿಭಟನೆಯನ್ನು ಅರಗಿಸಿಕೊಳ್ಳಲು ಆಗಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.