ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಆಡಳಿತಕ್ಕೆ ಬಂದು 3 ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಮೇ 26ರಿಂದ ಜೂನ್ 15ರವರೆಗೆ ಸಂಭ್ರಮಾಚರಣೆಯನ್ನು ನಡೆಸಲು ನಿರ್ಧಾರಿಸಲಾಗಿದೆ.
ಮೇ 26ರಂದು ಗುವಾಹಟಿಯಲ್ಲಿ ಪ್ರಧಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವುದರ ಮೂಲಕ ಸಂಭ್ರಮಾಚರಣೆ ಆರಂಭಗೊಳ್ಳಲಿದೆ. ಅಲ್ಲದೇ ಮುಂದಿನ 20 ದಿನಗಳಲ್ಲಿ ಅವರು ಒಟ್ಟು 4 ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
’ನವ ಭಾರತ’ ಎಂಬ ಶೀರ್ಷಿಕೆಯಡಿ ದೇಶದ 900 ನಗರಗಳಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ.
ಈ ಬಾರಿ ಮೋದಿ 2 ಕೋಟಿ ಪತ್ರಗಳನ್ನು ಬರೆಯಲಿದ್ದಾರೆ. ಮಾತ್ರವಲ್ಲದೇ ಸರ್ಕಾರದ ಕಾರ್ಯಗಳ ವಿವರಗಳಿರುವ ಸುಮಾರು 10 ಕೋಟಿ ಎಸ್ಎಂಎಸ್ಗಳನ್ನು ಕಳುಹಿಸಿಕೊಡಲಿದ್ದಾರೆ.
ಕಾರ್ಯಕ್ರಮಗಳು ಬಡವರ ಪರ ಮತ್ತು ಸರ್ಕಾರದ ಯೋಜನೆಗಳನ್ನು ಕೇಂದ್ರೀಕರಿಸಿ ಇರಬೇಕು ಎಂದು ಆದೇಶಿಸಲಾಗಿದೆ.
ಉಜ್ವಲ ಸೇರಿದಂತೆ ಇತರ ಯೋಜನೆಗಳ ವಿನ್ನರ್ಗಳೊಂದಿಗೆ ಕೇಂದ್ರ ಸಚಿವರುಗಳು ಆಹಾರ ಸೇವಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.