ನವದೆಹಲಿ: ದಕ್ಷಿಣ ಆಫ್ರಿಕಾದ ವಿರುದ್ದ ನಡೆದ ತ್ರಿಕೋನ ಸರಣಿ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡ ಜಯಭೇರಿ ಬಾರಿಸಿದೆ.
ಪೂನಂ ರಾವತ್ ಮತ್ತು ಮಿಥಿಲಿ ರಾಜ್ ಗಳಿಸಿದ ಅಜೇಯ 127 ರನ್ಗಳು ಭಾರತದ ಗೆಲುವಲ್ಲಿ ಮಹತ್ತರ ಪಾತ್ರವಹಿಸಿವೆ. ದಕ್ಷಿಣ ಆಫ್ರಿಕಾದ ವಿರುದ್ದ 8 ವಿಕೆಟ್ಗಳ ಭರ್ಜರಿ ಜಯವನ್ನು ಗಳಿಸುವ ಮೂಲಕ ಭಾರತ ಮಹಿಳಾ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. 3 ವಿಕೆಟ್ ಕಬಳಿಸಿದ ಜುಲನ್ ಗೋಸ್ವಾಮಿ ಸ್ಟಾರ್ ಆಗಿ ಮಿಂಚಿದರು.
ನಾಯಕಿ ರಾಜ್ ಭಾರತೀಯ ತಂಡವನ್ನು ಅಜೇಯದತ್ತ ಮುನ್ನುಗ್ಗಿಸಿದ್ದು ಮಾತ್ರವಲ್ಲದೇ 100 ಏಕದಿನ ಪಂದ್ಯದಲ್ಲಿ ಭಾಗವಹಿಸಿದ ಭಾರತದ ಮೊದಲ ನಾಯಕಿ ಎನಿಸಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.