ಬೆಂಗಳೂರು : ಸಮರ್ಥ ಭಾರತ ಸಂಸ್ಥೆಯು ಜೂನ್ 5 ರಿಂದ ಆಗಸ್ಟ್ 15 ರ ವರೆಗೆ ರಾಜ್ಯಾದ್ಯಂತ 1 ಕೋಟಿ ಗಿಡ ನೆಡುವ ಬೃಹತ್ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ರಾಜ್ಯದ ಸುಮಾರು 400 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಕೈ ಜೋಡಿಸಲಿವೆ. ರಾಜ್ಯಾದ್ಯಂತ ಸುಮಾರು 1 ಕೋಟಿಗೂ ಅಧಿಕ ಗಿಡ ನೆಡುವ ಪ್ರಕ್ರಿಯೆಗೆ ಈಗಾಗಲೇ ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ ಗಿಡಗಳನ್ನು ಕೊಡುಗೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರತ್ಯಕ್ಷ ಗಿಡ ನೆಡುವುದು, ಸೀಡ್ ಬಾಲನ್ನು ನೆಲದಲ್ಲಿ ಹೂತು ನೆಡುವುದು, ಆಯಾ ಗಿಡಗಳ ಬೀಜಗಳನ್ನು ನೇರವಾಗಿ ಬಿತ್ತುವುದು ಮುಂತಾದ ಪ್ರಕಾರಗಳಲ್ಲಿ ಈ ಅಭಿಯಾನ ನಡೆಯಲಿದೆ.
ಗಿಡದ ಜೊತೆ ಸೆಲ್ಫಿ
ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಗಿಡಗಳನ್ನು ಬೆಳೆಸುವ ಸ್ವಯಂಸೇವಕರು ಅವುಗಳ ಜೊತೆ ಸೆಲ್ಫಿ ತೆಗೆದು #SamarthaBharata ಹ್ಯಾಷ್ ಟ್ಯಾಗ್ನೊಂದಿಗೆ ಟ್ವಿಟರ್ ಅಥವಾ ಫೇಸ್ಬುಕ್ನಲ್ಲಿ ಹಂಚಿಕೊಳ್ಳಬಹುದು. ಪರಿಸರ ಸಂರಕ್ಷಣೆ ಕುರಿತ ವಿಚಾರಗಳನ್ನು, ವೀಡಿಯೋ ಹಾಗೂ ಇನ್ಫೋಗ್ರಾಫಿಕ್ಸ್ಗಳನ್ನು ಜಾಲತಾಣಗಳ ಮೂಲಕ ಹಂಚಿಕೊಳ್ಳಬಹುದು.
ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘ, ಸಂಸ್ಥೆಗಳು ಪಾಲ್ಗೊಳ್ಳುವಂತೆ ಸಮರ್ಥ ಭಾರತ ಮನವಿ ಮಾಡಿಕೊಂಡಿದೆ.
ಹೆಚ್ಚಿನ ಮಾಹಿತಿಗಾಗಿ 9980000993 (ಹರೀಶ್) 9591810302 (ಕೃಷ್ಣ ಗೌಡ) ಇವರನ್ನು ಸಂಪರ್ಕಿಸಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.