ನವದೆಹಲಿ: ಸಿಕ್ಕಿಂನ ನಾಥು ಲಾ ಮಾರ್ಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆ ನಡೆಸುತ್ತಿರುವ ಭಕ್ತರು ಚೀನಾ ಕಡೆಯಿಂದ ಕೆಲವೊಂದು ಸಮಸ್ಯೆಯಗಳನ್ನು ಎದುರಿಸಿದ್ದಾರೆ ಎಂಬುದನ್ನು ವಿದೇಶಾಂಗ ಸಚಿವಾಲಯ ಖಚಿತಪಡಿಸಿದ್ದು, ಈ ಬಗ್ಗೆ ಆ ದೇಶದೊಂದಿಗೆ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದೆ.
ಟಿಬೆಟ್ನಲ್ಲಿ ಭೂಕುಸಿತ ಉಂಟಾಗಿದೆ ಎನ್ನುತ್ತಾ ಚೀನಾ ಅಧಿಕಾರಿಗಳು ಗೇಟ್ ಬಂದ್ ಮಾಡಿದ ಹಿನ್ನಲೆಯಲ್ಲಿ ಸುಮಾರು 50 ಯಾತ್ರಾರ್ಥಿಗಳು ಸಿಕ್ಕಿಂನಲ್ಲಿ ಸಿಲುಕಿ ಹಾಕಿಕೊಂಡರು ಎನ್ನಲಾಗಿದೆ.
ಈ ಬಗ್ಗೆ ಸಿಕ್ಕಿಂ ಮುಖ್ಯಮಂತ್ರಿ ಪವಣ್ ಕುಮಾರ್ ಚಮ್ಲಿಂಗ್ ಅವರು ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿಷಯ ತಿಳಿಸಿದ್ದಾರೆ.
ಇದೀಗ ಈ ವಿಷಯದ ಬಗ್ಗೆ ಚೀನಾದೊಂದಿಗೆ ವಿಷಯ ಪ್ರಸ್ತಾಪ ಮಾಡುವುದಾಗಿ ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ.
2015ರಲ್ಲಿ ನಾಥು ಲಾ ಮಾರ್ಗ ಭಾರತದ ಯಾತ್ರಾರ್ಥಿಗಳಿಗಾಗಿ ತೆರೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.