ನವದೆಹಲಿ : ಕರಾವಳಿ ಭಾಗದ ಜನಪದ ಕ್ರೀಡೆ ಕಂಬಳದ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಂಕಿತ ಹಾಕಿದ್ದಾರೆ. ಈ ಮೂಲಕ ಕರಾವಳಿಯ ಜನಪದ ಕ್ರೀಡೆ ಕಂಬಳ ನಡೆಸಲು ಅನುಮತಿ ಸಿಕ್ಕಿದಂತಾಗಿದೆ.
ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ಕ್ಕೆ ತಿದ್ದುಪಡಿ ತರುವಂತೆ ರಾಜ್ಯ ಸರ್ಕಾರವು ಕಂಬಳ ವಿಧೇಯಕವನ್ನು ಫೆಬ್ರವರಿ 13 ರಂದು ಕರ್ನಾಟಕ ವಿಧಾನಮಂಡಲ ತಿದ್ದುಪಡಿ ಕಾಯ್ದೆಗೆ ಅಂಗೀಕಾರ ನೀಡಿ, ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. ಆದರೆ ರಾಜ್ಯಪಾಲರು ಈ ಕಾಯ್ದೆಗೆ ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಿಕೊಟ್ಟಿದ್ದರು.
ನಂತರ ಮೇ 5 ರಂದು ನಡೆದ ಸಚಿವ ಸಂಪುಟದಲ್ಲಿ ರಾಷ್ಟ್ರಪತಿಗಳು ಆಕ್ಷೇಪಿಸಿದ್ದ ಅಂಶಗಳನ್ನು ಸರಿಪಡಿಸಿ, ಸುಗ್ರೀವಾಜ್ಞೆ ರೂಪದಲ್ಲಿ ಮತ್ತೆ ರಾಷ್ಟ್ರಪತಿಗಳಿಗೆ ಕಳುಹಿಸಲಾಗಿತ್ತು.
ಇದೀಗ ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ ದೊರೆತಿದ್ದು, ಈ ಕುರಿತು ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಇದರ ಪ್ರಕಾರ ಮುಂದಿನ 6 ತಿಂಗಳ ಅವಧಿಯಲ್ಲಿ ಕಂಬಳ ನಡೆಸಲು ಕರಾವಳಿ ಭಾಗದ ಜನರಿಗೆ ಅಧಿಕೃತ ಅನುಮತಿ ಲಭಿಸಿದೆ.
ಈ 6 ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಕಂಬಳ ತಿದ್ದುಪಡಿ ಮಸೂದೆಗೆ ಕೇಂದ್ರದ ಸೂಚನೆ ಪ್ರಕಾರ ಕೆಲವು ತಿದ್ದುಪಡಿ ಹೇಳಿದ್ದನ್ನು ಎರಡೂ ಸದನಗಳಲ್ಲಿ ಮಂಡನೆ ಮಾಡಿ ರಾಜ್ಯಪಾಲರಿಗೆ ಅದನ್ನು ಕಳುಹಿಸಿ ನಂತರ ಮಸೂದೆಯು ಕಾಯ್ದೆ ರೂಪವನ್ನು ಪಡೆಯಲಿದ್ದು, ಕಂಬಳಕ್ಕೆ ಶಾಶ್ವತವಾದ ಅಂಗೀಕಾರ ಲಭಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.