ಮುಂಬೈ : ಯೋಗ ಗುರು ಬಾಬಾ ರಾಮ್ದೇವ್ ಅವರು 2040 ರ ವೇಳೆಗೆ ಭಾರತವನ್ನು ಆರ್ಥಿಕ ಸೂಪರ್ ಪವರ್ ಮಾಡುವತ್ತ ತಮ್ಮ ಕೊಡುಗೆಯನ್ನು ನೀಡಲು ಬಯಸುತ್ತಿದ್ದಾರೆ.
ಯೋಗವನ್ನು ಹೊರತುಪಡಿಸಿ ತಮ್ಮ ಪತಂಜಲಿ ಆಯುರ್ವೇದದ ಮೂಲಕ ಭಾರತದ ಆರ್ಥಿಕತೆಯ ಪ್ರಗತಿಗೆ ಕೊಡುಗೆಯನ್ನು ಅವರು ನೀಡುತ್ತಿದ್ದಾರೆ.
ಅವರ ಪತಂಜಲಿ ಆಯುರ್ವೇದ ಗ್ರಾಹಕ ಬ್ರ್ಯಾಂಡ್ ಶ್ಯಾಂಪೂವಿನಿಂದ ಹಿಡಿದು ನ್ಯೂಡಲ್ಸ್ವರೆಗೂ ವಸ್ತುಗಳನ್ನು ಮಾರುಕಟ್ಟೆಗೆ ತಂದಿದ್ದು, ಬಹುರಾಷ್ಟ್ರೀಯ ಕಂಪೆನಿಗಳಿಗೂ ನಿದ್ದೆಗೆಡಿಸುತ್ತಿದೆ.
ಮುಂಬೈಯಲ್ಲಿ ನಡೆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಮಾವೇಶದ ವೇಳೆ ಮಾತನಾಡಿದ ಅವರು ಸ್ಥಳೀಯ ಬ್ರಾಂಡ್ಗಳಿಂದಲೇ ಆರ್ಥಿಕ ಪ್ರಗತಿ ಸಾಧ್ಯವಾಗುತ್ತಿದೆ ಎಂದಿದ್ದಾರೆ.
2040 ಕ್ಕೆ ಭಾರತವನ್ನು ಆರ್ಥಿಕ ಸೂಪರ್ ಪವರ್ ಆಗಿಸುವಲ್ಲಿ ಗುರಿಯಿಟ್ಟಿರುವ ನಾವು ಇದಕ್ಕಾಗಿ ಸುದೀರ್ಘ ಸಮಯದ ಚಿಂತನೆಯನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.
ಬಾಬಾ ರಾಮ್ದೇವ್ ಅವರ ಪತಂಜಲಿ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ದೊಡ್ಡ ಕ್ರಾಂತಿಯನ್ನೇ ಎಬ್ಬಿಸಿದ್ದು 2016-17 ನೇ ಸಾಲಿನಲ್ಲಿ 10 ಸಾವಿರ 561 ರೂ. ಕೋಟಿ ವಹಿವಾಟು ನಡೆಸಿದೆ. ಮುಂಬರುವ ದಿನಗಳಲ್ಲಿ ಇದನ್ನು ದ್ವಿಗುಣಗೊಳಿಸುವ ಭರವಸೆಯನ್ನು ಇದು ಹೊಂದಿದೆ.
2017-18 ರ ಸಾಲಿಗೆ ಅದು 20 ಸಾವಿರ ಕೋಟಿಯ ಆದಾಯವನ್ನು ನಿರೀಕ್ಷಿಸುತ್ತಿದೆ. ಮುಂಬರುವ ವರ್ಷಗಳಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಅದು ಹೊಂದಿದೆ.
2020 ಕ್ಕೆ 50 ಸಾವಿರ ಕೋಟಿ ವಹಿವಾಟು ನಡೆಸಲು ಅದು ಈಗಿನಿಂದಲೇ ತಯಾರಿ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.