ಶ್ರೀನಗರ: ಅಮರನಾಥ ಯಾತ್ರಿಕರಿದ್ದ ಬಸ್ ಮೇಲೆ ಸೋಮವಾರ ಉಗ್ರರು ದಾಳಿ ನಡೆಸಿದ ಸಂದರ್ಭ ಧೃತಿಗೆಡದೆ 50 ಮಂದಿಯನ್ನು ರಕ್ಷಿಸುವಲ್ಲಿ ಸಫಲನಾದ ಬಸ್ ಡ್ರೈವರ್ ಯಾತ್ರಿಕರ ಪಾಲಿನ ಹೀರೋ ಆಗಿ ಹೊರಹೊಮ್ಮಿದ್ದಾನೆ.
ಶೇಖ್ ಸಲೀಂ ಗಫೂರ್ ಭಾಯ್ 57 ಮಂದಿಯನ್ನು ಹೊತ್ತು ಅಮರನಾಥದತ್ತ ಬಸ್ ಚಾಲನೆ ಮಾಡುತ್ತಿದ್ದರು. ಈ ವೇಳೆ ಹಠಾತ್ತನ್ನೇ ಉಗ್ರರು ದಾಳಿ ನಡೆಸಿ ಗುಂಡಿನ ಸುರಿಮಳೆಗೈದಿದ್ದಾರೆ.
ಆದರೆ ಗಫೂರ್ ಇಂತಹ ಕಠಿಣ ಪರಿಸ್ಥಿತಿಯಲ್ಲೂ ಧೃತಿಗೆಡದೆ ಬಸ್ನ್ನು ನಿಲ್ಲಿಸದೆ ಕತ್ತಲೆಯಿದ್ದರೂ ಚಲಾಯಿಸಿಕೊಂಡು ಹೋಗಿದ್ದಾರೆ. ಉಗ್ರರು ಗುಂಡು ಹಾರಿಸುತ್ತಿದ್ದರೂ ತುಸುವೂ ವಿಚಲಿತರಾಗದೆ, ತನ್ನ ಪ್ರಾಣವನ್ನೂ ಲೆಕ್ಕಿಸದೆ ಯಾತ್ರಿಕರನ್ನು ಸುರಕ್ಷಿತ ಪ್ರದೇಶದತ್ತ ಕೊಂಡೊಯ್ಯವಲ್ಲಿ ಸಫಲರಾಗಿದ್ದಾರೆ.
7 ಮಂದಿಯನ್ನು ಉಳಿಸಲು ಗಫೂರ್ ಅವರಿಗೆ ಸಾಧ್ಯವಾಗಿಲ್ಲ ಆದರೆ 50 ಮಂದಿ ಅವರ ಧೈರ್ಯ ಹಾಗೂ ಸಮಯಪ್ರಜ್ಞೆಯಿಂದಾಗಿ ಬದುಕುಳಿದಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರನ್ನು ಶೌರ್ಯ ಪ್ರಶಸ್ತಿಗೆ ನಾಮ ನಿರ್ದೇಶನಗೊಳಿಸಲಾಗುವುದು ಎಂದು ಗುಜರಾತ್ ಸಿಎಂ ವಿಜಯ್ ರೂಪಾಣಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.