ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದನ್ನು ಪಾಕಿಸ್ಥಾನ ಅನಧಿಕೃತವಾಗಿ ಆಕ್ರಮಿಸಿಕೊಂಡಿದೆ. ಅಲ್ಲಿನ ವ್ಯಕ್ತಿಗೆ ವೈದ್ಯಕೀಯ ವೀಸಾ ನೀಡುತ್ತೇವೆ. ಅದಕ್ಕೆ ಪಾಕಿಸ್ಥಾನದ ಪತ್ರದ ಅವಶ್ಯಕತೆ ಇಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಭಾರತದ ಹೊಸ ನಿಯಮದ ಪ್ರಕಾರ ವೈದ್ಯಕೀಯ ವೀಸಾಗೆ ಅರ್ಜಿ ಹಾಕುವ ಪಾಕಿಸ್ಥಾನಿಯರು ಪಾಕಿಸ್ಥಾನದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಸರ್ತಾಝ್ ಅಜೀಜ್ ಅವರ ಪತ್ರವನ್ನು ಪಡೆಯಬೇಕಿದೆ.
ಆದರೆ ಈ ನಿಯಮ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಜನತೆಗೆ ಅನ್ವಯವಾಗುವುದಿಲ್ಲ. ಯಾಕೆಂದರೆ ಅದು ಭಾರತದ ಅವಿಭಾಜ್ಯ ಅಂಗ. ಅದನ್ನು ಪಾಕಿಸ್ಥಾನ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಸುಷ್ಮಾ ಹೇಳಿದ್ದಾರೆ.
೨೪ ವರ್ಷದ ಪಿಓಕೆ ವ್ಯಕ್ತಿ ಲಿವರ್ ಟ್ಯೂಮರ್ನಿಂದ ಬಳಲುತ್ತಿದ್ದು, ದೆಹಲಿಗೆ ಬಂದು ಚಿಕಿತ್ಸೆ ಪಡೆಯಲು ಬಯಸುತ್ತಿದ್ದಾನೆ. ಆತನಿಗೆ ಅಜೀಜ್ ಅವರ ಪತ್ರ ಇಲ್ಲದೆಯೂ ವೈದ್ಯಕೀಯ ವಿಸಾ ನೀಡುತ್ತೇವೆ ಎಂದು ಸುಷ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.