ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿರುವ ವೆಂಕಯ್ಯ ನಾಯ್ಡು ಅವರು, ತನಗೆ ಬೆಂಬಲವಾಗಿ ನಿಂತ ಪ್ರಧಾನಿ ನರೇಂದ್ರ ಮೋದಿ ಮತ್ತು ಮಿತ್ರ ಪಕ್ಷಗಳಿಗೆ ಧನ್ಯವಾದಗಳನ್ನು ಹೇಳಿದರು.
‘ನನ್ನ ಮೇಲೆ ನಂಬಿಕೆಯಿಟ್ಟ ಮೋದಿ, ಷಾ, ಇತರ ನಾಯಕರಿಗೆ ಧನ್ಯವಾದಗಳು. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ, ನಾಮಪತ್ರಕ್ಕೆ ನ್ಯಾಯ ಒದಗಿಸುತ್ತೇನ ಎಂಬ ಭರವಸೆ ನನಗಿದೆ. ಕಳೆದ 4 ದಶಕಗಳಿಂದ ಸಾರ್ವಜನಿಕ ಬದುಕಿನಲ್ಲಿದ್ದೇನೆ. ಉಪ ರಾಷ್ಟ್ರಪತಿ ಸ್ಥಾನ ವಿಭಿನ್ನವಾಗಿದ್ದು, ಅದಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡುತ್ತೇನೆ’ ಎಂದಿದ್ದಾರೆ.
‘ಅತೀ ಚಿಕ್ಕ ವಯಸ್ಸಲ್ಲಿ ತಾಯಿಯನ್ನು ಕಳೆದುಕೊಂಡಿದ್ದೇನೆ. ಆ ಬಳಿಕ ನನ್ನ ಪಕ್ಷವನ್ನೇ ತಾಯಿಯಾಗಿ ಪರಿಗಣಿಸಿದ್ದೇನೆ, ಅದು ನನ್ನನ್ನು ಇಲ್ಲಿಯವರೆಗೆ ಬೆಳೆಸಿತು. ಬಿಜೆಪಿ ತೊರೆಯಲು ಬೇಸರವಾಗುತ್ತಿದೆ. ಈ ಸಂದರ್ಭದಲ್ಲಿ ಭಾವುಕನಾಗಿದ್ದೇನೆ’ ಎಂದರು.
೨೦೧೯ರಲ್ಲಿ ಮೋದಿಯೇ ಪ್ರಧಾನಿಯಾಗುತ್ತಾರೆ ಎಂಬ ಆಶಯವಿದೆ. ಆ ಬಳಿಕ ಸಕ್ರಿಯ ರಾಜಕಾರಣದಿಂದ ದೂರವಾಗಬೇಕು ಎಂದು ಬಯಸಿದ್ದೆ. ಆದರೆ ಅದೃಷ್ಟ ಬೇರೆಯದ್ದೇ ಯೋಜನೆ ಹಾಕಿತ್ತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.