News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಥಬೀದಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಸುಳ್ಯ: ನಗರೋತ್ಥಾನ ಯೋಜನೆಯಡಿಯಲ್ಲಿ ಅಭಿವೃದ್ಧಿಯಾದ ಸುಳ್ಯ ರಥಬೀದಿಯ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಆದೇಶ ನೀಡಿದರು.

SUL-26MAR-AB-Ibrahim

ಕಾಮಗಾರಿಯ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಕಾಮಗಾರಿಯನ್ನು ಸಮರ್ಪಕವಾಗಿ ಮುಗಿಸಲು ಮತ್ತು ಇಂಟರ್‌ಲಾಕ್ ಹಾಕಲು ಬಾಕಿ ಇರುವುದನ್ನು ಕೂಡಲೇ ಮುಗಿಸಲು ಅವರು ಇಂಜಿನಿಯರ್‌ಗೆ ಆದೇಶ ನೀಡಿದರು.

ಅವರು ಗುರುವಾರ ತಾಲೂಕು ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿ ಬಳಿಕ ಈ ಕುರಿತು ಸೂಚನೆ ನೀಡಿದರು. ಮುಂದಿನ ಬುಧವಾರ ಮತ್ತೆ ಭೇಟಿ ನೀಡುವುದಾಗಿ ತಿಳಿಸಿದ ಅವರು ಈ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಆಹವಾಲು ಸ್ವೀಕರಿಸಿ, ಕೆಲವು ಕಡತಗಳ ವಿಲೇವಾರಿಗೂ ತಹಶೀಲ್ದಾರ್‌ರಿಗೆ ಸೂಚನೆ ನೀಡಿದರು. ಸಾರ್ವಜನಿಕರು ನೀಡಿದ ಹಲವು ದೂರುಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಅದರ ಪರಿಹಾರಕ್ಕೆ ಸೂಚಿಸಿದರು.

ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯ ಕಟ್ಟಡ ಮತ್ತು ಶೌಚಾಲಯವನ್ನು ಜಿಲ್ಲಾಧಿಕಾರಿಯವರು ವೀಕ್ಷಿಸಿ ಶೌಚಾಲಯ ಮತ್ತು ಕಟ್ಟಡದಲ್ಲಿ ಶುಚಿತ್ವ ಕಾಪಾಡುವಂತೆ ಅವರು ಸೂಚನೆ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top