ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ.ಭೂಪೇಂದ್ರ ಯಾದವ್ ಇವರ ನೇತೃತ್ವದಲ್ಲಿ ಸಂಸದರಾದ ಶ್ರೀ.ನಳಿನ್ ಕುಮಾರ್ ಕಟೀಲ್, ಕು.ಶೋಭಾ ಕರಂದ್ಲಾಜೆ, ಶ್ರೀ.ಪ್ರತಾಪ್ ಸಿಂಹ, ಶ್ರೀ.ಸುರೇಶ್ ಗೋಪಿ ಹಾಗೂ ಶ್ರೀ.ರಿಚ್ಚರ್ಡ್ ಹೇ ಇವರನ್ನೊಳಗೊಂಡ ನಿಯೋಗವು ಇಂದು ಕೇಂದ್ರ ಗೃಹ ಸಚಿವ ಶ್ರೀ.ರಾಜನಾಥ್ ಸಿಂಗ್ ಇವರನ್ನು ಭೇಟಿಯಾಗಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ನಡೆದಿರುವ ಬಿ.ಜೆ.ಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಎಲ್ಲಾ ಕೊಲೆಗಳ ಬಗ್ಗೆ ರಾಜ್ಯ ಸರಕಾರಗಳಿಂದ ವರದಿ ತರಿಸುವಂತೆ ಮತ್ತು ಅಪರಾಧಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ ರಾಜ್ಯದಲ್ಲಿನ ಅಶಾಂತಿ ವಾತಾವರಣವನ್ನು ಶಾಂತಗೊಳಿಸಲು ರಾಜ್ಯ ಸರಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.
ಅಲ್ಲದೇ ಸಂಸದರು ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿನ್ನಲೆಯಲ್ಲಿ ಪಿಎಫ್ಐ, ಕೆಎಫ್ಡಿ ಹಾಗೂ ಎನ್ಡಿಎಫ್ ಸಂಘಟನೆಗಳನ್ನು ನಿಷೇಧಿಸಬೇಕು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರ ಹತ್ಯೆ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆಯೂ ಗೃಹ ಸಚಿವರನ್ನು ಆಗ್ರಹಿಸಿದರು. ಕೇರಳದಲ್ಲಿ ಕಮ್ಯೂನಿಷ್ಟ್ ಪಕ್ಷವು ಹಿಂದೂ ಸಂಘಟನೆಗಳ ಹಾಗೂ ಭಾ.ಜ.ಪಾ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದು ರಾಜಕೀಯ ಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಮನವಿಯಲ್ಲಿ ಕೋರಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.