ನವದೆಹಲಿ: ಇಡೀ ಜಗತ್ತೇ ಬಂಡವಾಳಶಾಹಿಯ ಹಿಡಿತದಲ್ಲಿದೆ. ಕೇವಲ ಭಾರತಕ್ಕೆ ಮಾತ್ರ ಜಗತ್ತನ್ನು ಈ ವಿಪತ್ತಿನಿಂದ ರಕ್ಷಿಸುವ ಸಾಮರ್ಥ್ಯವಿದೆ ಎಂಬುದಾಗಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ನಾಗಪುರದಲ್ಲಿ ಹಿಂದೂ ಸ್ವಯಂಸೇವಕ ಸಂಘದ ಪುರುಷ ಮತ್ತು ಮಹಿಳಾ ಸ್ವಯಂಸೇವಕರಿಗೆ ಜರುಗಿದ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
’ನಮಗೆ ಹಿಂದೂ ಸಮಾಜವನ್ನು ನಿರ್ಮಿಸುವ ಅಗತ್ಯವಿದೆ, ಅದು ಸಮಸ್ಯೆಯಲ್ಲಿದೆ ಎಂಬ ಕಾರಣಕ್ಕಲ್ಲ, ಅದು ನಮ್ಮದು ಎಂಬ ಕಾರಣಕ್ಕೆ. ಅಷ್ಟೇ ಅಲ್ಲದೇ ಪವಿತ್ರ ಹಿಂದೂ ಧರ್ಮ, ಹಿಂದೂ ಸಂಸ್ಕೃತಿ, ಹಿಂದೂ ರಾಷ್ಟ್ರವನ್ನು ಸಂರಕ್ಷಿಸುವುದಕ್ಕಾಗಿ’ ಎಂದಿದ್ದಾರೆ.
ಸಮಾರಂಭದಲ್ಲಿ ಉಪಸ್ಥಿತರಿದ್ದ ನೀತಿ ಆಯೋಗದ ಸದಸ್ಯ ವಿವೇಕ್ ದೆಬೆರಾಯ್ ಅವರು ಮಾತನಾಡಿ, ‘ಹಿಂದೆ ರಾಜರುಗಳಿಗೆ ರಕ್ಷಣೆ, ಆಂತರಿಕ ಭದ್ರತೆ, ಕಾನೂನು ಪಾಲನೆಯ ಕರ್ತವ್ಯ ಮಾತ್ರ ಇತ್ತು. ಉಳಿದೆಲ್ಲವನ್ನೂ ಸಮುದಾಯದವರು ನೋಡಿಕೊಳ್ಳುತ್ತಿದ್ದರು. ಆದರೆ ಬ್ರಿಟಿಷ್ ಆಳ್ವಿಕೆಯಿಂದಾಗಿ ನಾವು ಈಗ ಎಲ್ಲಾ ಸಮಸ್ಯೆಗಳಿಗೂ ಸರ್ಕಾರವನ್ನೇ ನೋಡುತ್ತಿದ್ದೇವೆ. ಭಾರತದ ಎಲ್ಲಾ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರಕ್ಕೆ ಸಾಧ್ಯವಿಲ್ಲ, ಸಮುದಾಯದವರು ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.