ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ಪತಂಜಲಿ ಫ್ಯಾಕ್ಟರಿಯನ್ನು ನಿರ್ಮಿಸುವ ಸಲುವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಪಂತಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್ದೇವ್ ತಿಳಿಸಿದ್ದಾರೆ.
ದೇಶದಲ್ಲಿನ ಭಯೋತ್ಪಾದನೆಯ ಕುರಿತು ಮಾತನಾಡಿದ ಅವರು, ಯೋಗದಲ್ಲಿ ಪಾಂಡಿತ್ಯವನ್ನು ಸಾಧಿಸಿದ ಯಾರೊಬ್ಬರೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ. ಯೋಗವನ್ನು, ಯೋಗದಲ್ಲಿ ಪಾಂಡಿತ್ಯವನ್ನು ಸಾಧಿಸಿದ ಯಾವೊಬ್ಬನೂ ಭಯೋತ್ಪಾದಕನಾದ ಇತಿಹಾಸವಿಲ್ಲ ಎಂದಿದ್ದಾರೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರತಿಯೊಬ್ಬ ಮಕ್ಕಳಿಗೂ ಎಲ್ಲಾ ಧರ್ಮದ ಒಳ್ಳೆಯದನ್ನು ತಿಳಿಸಿಕೊಡಬೇಕು. ಇದರಿಂದ ಧರ್ಮಗಳ ನಡುವೆಯೂ ಸೌಹಾರ್ದತೆ ಬೆಳೆಯುತ್ತದೆ ಎಂದಿದ್ದಾರೆ.
ಕಣಿವೆಯಲ್ಲಿ ದುಷ್ಕರ್ಮಗಳನ್ನು ನಡೆಸುವ ಮನಃಸ್ಥಿತಿಯನ್ನು ಯೋಗ ಪರಿಹಾರ ಮಾಡಲಿದೆ ಎಂದು ನಂಬಿರುವುದಾಗಿ ಅವರು ಹೇಳಿದ್ದಾರೆ.
ಪತಂಜಲಿ ಘಟಕವನ್ನು ಜಮ್ಮು ಕಾಶ್ಮೀರದಲ್ಲಿ ಸ್ಥಾಪಿಸಲು ಬಯಸಿದ್ದು, ಇದಕ್ಕಾಗಿ 150 ಎಕರೆ ಭೂಮಿಯನ್ನು ಖರೀದಿಸುವ ಪ್ರಕ್ರಿಯೆಯಲ್ಲಿದ್ದೇವೆ. ಕಾಶ್ಮೀರಿ ಯುವಕರಿಗೂ ನಾವು ಉದ್ಯೋಗಾವಕಾಶವನ್ನು ನೀಡಲಿದ್ದೇವೆ ಎಂದಿದ್ದಾರೆ.
ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿರುವ ಅವರು ಎಲ್ಲಾ ವಲಯದಲ್ಲಿ ಚೀನಾವನ್ನು ಎದುರಿಸಲು ಭಾರತ ಸಿದ್ಧವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.