ರಾಯ್ಪುರ : ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ 5000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ರಮಣ್ ಸಿಂಗ್ ಅವರು ಸೋಮವಾರು 5000 ಮೀಟರ್ ಮ್ಯಾರಥಾನ್ಗೆ ರಾಯ್ಪರದಲ್ಲಿ ಚಾಲನೆ ನೀಡಿದರು. ಅಲ್ಲದೆ ರಾಯ್ಪುರದ ಕಮಲ್ ವಿಹಾರ್ ಪ್ರದೇಶದಲ್ಲಿ 5000 ಔಷಧೀಯ ಸಸ್ಯಗಳನ್ನು ನೆಡಲಾಯಿತು.
ಈ ವೇಳೆ ಮಾತನಾಡಿದ ಅವರು 5000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಾನು ಪ್ರತಿಯೊಬ್ಬ ಬೆಂಬಲಿಗರಿಗೂ ಕುಟುಂಬಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಮ್ಯಾರಥಾನ್ ದೊಡ್ಡ ಯಶಸ್ಸಾಗಿದ್ದು ಹಲವಾರು ಮಂದಿ ಇದರಲ್ಲಿ ಭಾಗವಹಿಸಿರುವುದನ್ನು ನೋಡಲು ಸಂತೋಷವಾಗುತ್ತಿದೆ. ನನ್ನ 5000 ದಿನಗಳ ಅವಧಿಯಲ್ಲಿ ಈ ರಾಜ್ಯ ಅಭಿವೃದ್ಧಿ ಹೊಂದಿದೆ ಎಂಬುದು ನನಗೆ ಸಂತೋಷ ತಂದಿದೆ ಎಂದರು.
ಅಲ್ಲದೆ, ಕೇಂದ್ರದ ಸಹಕಾರದೊಂದಿಗೆ ರಾಜ್ಯ ಅಭಿವೃದ್ಧಿಯನ್ನು ಕಂಡಿದೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ನಾವು ತಂದ ಕಲ್ಯಾಣ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಯಶಸ್ವಿಯಾಗಿದೆ.
ಕನಿಷ್ಟ 14 ಲಕ್ಷ ಕುಟುಂಬಗಳು ಉಜ್ವಲ ಯೋಜನೆಯ ಫಲಾನುಭವಿಗಳಾಗಿವೆ. ಇದನ್ನು ನಾವು 35 ಲಕ್ಷ ಕುಟುಂಬಗಳಿಗೆ ವಿಸ್ತರಿಸುತ್ತೇವೆ. 11 ಲಕ್ಷ ಕುಟುಂಬಗಳು ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಿವೆ. ವಿದ್ಯುತ್ ಉತ್ಪಾದನಾ ಸಾಮರ್ಥ್ಯ, ದೂರಸಂಪರ್ಕ ಸೌಲಭ್ಯಗಳು ಈ ರಾಜ್ಯದಲ್ಲಿ ಅಭಿವೃದ್ಧಿಯಾಗಿದೆ ಎಂದರು.
ಬುಡಕಟ್ಟು ಜನಾಂಗ ಮತ್ತು ಅರಣ್ಯ ನಿವಾಸಿಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಬಹಳಷ್ಟು ಶ್ರಮಿಸುತ್ತಿದೆ. ಛತ್ತೀಸ್ಗಢದ ಅರಣ್ಯ ಇಲಾಖೆ ಮತ್ತು ಸರ್ಕಾರ ಪ್ರತಿ ವರ್ಷ ಅರಣ್ಯಗಳಿಗಾಗಿ 8 ಕೋಟಿ ರೂ. ಹೂಡಿಕೆ ಮಾಡಲು ಯೋಜಿಸುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.