ಲಕ್ನೋ: ಗೋರಖ್ಪುರ ಆಸ್ಪತ್ರೆಯಲ್ಲಿ ಶಿಶು ಮಾರಣಹೋಮದ ಭೀಕರ ದುರ್ಘಟನೆ ಸಂಭವಿಸಿದ ಹಿನ್ನಲೆಯಲ್ಲಿ ಬಿಜೆಪಿ ಲೋಕಸಭಾ ಸಂಸದ ವರುಣ್ ಗಾಂಧಿ ಅವರು ತಮ್ಮ ಸಂಸದ ಅನುದಾನದಿಂದ ಉತ್ತರಪ್ರದೇಶದ ಸುಲ್ತಾನ್ಪುರ ಜಿಲ್ಲೆಯ ಮಕ್ಕಳ ವೈದ್ಯಕೀಯ ಘಟಕಕ್ಕೆ 5 ಕೋಟಿ ರೂಪಾಯಿಗಳ ಅನುದಾನವನ್ನು ನೀಡಿದ್ದಾರೆ.
ಆಗಸ್ಟ್ 7ರಿಂದ ಉತ್ತರಪ್ರದೇಶ ಸರ್ಕಾರಿ ಸ್ವಾಮ್ಯದ ಬಿಆರ್ಡಿ ಮೆಡಿಕಲ್ ಕಾಲೇಜಿನಲ್ಲಿ 70ಕ್ಕೂ ಅಧಿಕ ಮಕ್ಕಳು ಸಾವಿಗೀಡಾಗಿದ್ದಾರೆ, ಆಮ್ಲಜನಕ ಪೂರೈಕೆ ಸ್ಥಗಿತ ಮಕ್ಕಳ ಮಾರಣಹೋಮಕ್ಕೆ ಕಾರಣ ಎನ್ನಲಾಗುತ್ತಿದೆ.
ಈ ಘಟನೆ ನನ್ನನ್ನು ತೀವ್ರ ದುಃಖಕ್ಕೆ ದೂಡಿದೆ. ಎಲ್ಲಾ ಮಕ್ಕಳ ಅಗಲುವಿಕೆಯ ದುಃಖದಲ್ಲೂ ಈ ಘಟನೆ ನಮಗೆ ಮುಂಬರುವ ದಿನಗಳಲ್ಲಿ ಇಂತಹ ಘಟನೆ ಪುನಾರವರ್ತನೆಯಾಗದಂತೆ ತಡೆಯಲು ಸೂಕ್ತ ಕ್ರಮವನ್ನು ತೆಗೆದುಕೊಳ್ಳಲು ಪ್ರಚೋದಿಸಬೇಕು ಎಂದಿದ್ದಾರೆ.
ಮುಖ್ಯ ವೈದ್ಯಕೀಯ ಅಧಿಕಾರಿ, ಸುಲ್ತಾನ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು 5 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.