ಪುಣೆ: ಪುಣೆಯಲ್ಲಿ ನಡೆದ ಗಣೇಶ ಮೂರ್ತಿ ತಯಾರಿಕಾ ವರ್ಕ್ಶಾಪ್ ಇದೀಗ ಗಿನ್ನಿಸ್ ದಾಖಲೆಯ ಪುಟವನ್ನು ಸೇರುವ ಸಾಧ್ಯತೆ ಇದೆ.
ಪುಣೆ ಮಹಾನಗರ ಪಾಲಿಕೆ ಆಯೋಜನೆ ಮಾಡಿದ್ದ ಈ ಕಾರ್ಯಕ್ರಮದಲ್ಲಿ ಬರೋಬ್ಬರಿ 3087 ವಿದ್ಯಾರ್ಥಿಗಳು ಭಾಗವಹಿಸಿ ಗಣೇಶನ ಮೂರ್ತಿ ರಚನೆ ಮಾಡಿದರು.
ಪರಿಸರ ಸ್ನೇಹಿ ಗಣಪನನ್ನು ರಚಿಸುವುದನ್ನು ಪ್ರೋತ್ಸಾಹಿಸುವ ಸಲುವಾಗಿ ಈ ವರ್ಕ್ಶಾಪ್ ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮಕ್ಕಳನ್ನು ಅಭಿನಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.