ನವದೆಹಲಿ: 2002ರ ಗಲಭೆಯಲ್ಲಿ ಹಾನಿಗೊಳಗಾದ ಧಾರ್ಮಿಕ ಕೇಂದ್ರಗಳನ್ನು ಮರು ನಿರ್ಮಿಸುವ ವೆಚ್ಚವನ್ನು ಗುಜರಾತ್ ಸರ್ಕಾರ ಭರಿಸಬೇಕು ಎಂದು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದೆ. ಅಲ್ಲದೇ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೊಳಪಡಿಸಲು ಸಮ್ಮತಿಸಿದೆ.
2002ರಲ್ಲಿ ನಡೆದ ಗೋಧ್ರಾ ಹತ್ಯಾಕಾಂಡದ ಬಳಿಕ ಗುಜರಾತ್ನಲ್ಲಿ ಗಲಭೆ ಭುಗಿಲೆದ್ದಿತ್ತು. ಈ ವೇಳೆ 500ಕ್ಕೂ ಅಧಿಕ ಪ್ರಾರ್ಥನಾ ಮಂದಿರಗಳು, ಧಾರ್ಮಿಕ ಕೇಂದ್ರಗಳು ಹಾನಿಗೊಳಗಾಗಿದ್ದವು. ಈ ಎಲ್ಲದರ ಮರುನಿರ್ಮಾಣದ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಹೈಕೋರ್ಟ್ ತೀರ್ಪು ನೀಡಿತ್ತು.
ಈ ತೀರ್ಪನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಸರ್ಕಾರದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಸಮ್ಮತಿಸಿದೆ.
ಹಾನಿಯಾದ ಮನೆ, ಕಟ್ಟಡ, ಧಾರ್ಮಿಕ ಕೇಂದ್ರಗಳ ಮರುನಿರ್ಮಾಣಕ್ಕೆ ಗುಜರಾತ್ ಸರ್ಕಾರ ರೂ.50,000 ಪರಿಹಾರ ಯೋಜನೆಯನ್ನು ಆರಂಭಿಸಿದೆ. ಹೀಗಾಗೀ ಮರುನಿರ್ಮಾಣದ ಸಂಪೂರ್ಣ ವೆಚ್ಚ ಭರಿಸುವ ಅಗತ್ಯವಿಲ್ಲ ಎಂದು ಗುಜರಾತ್ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.