ಅಮರಾವತಿ: ಉತ್ತಮ ಆಡಳಿತವನ್ನು ನೀಡುವ ಸಲುವಾಗಿ ಆಂಧ್ರಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಅವರು ಒಳ್ಳೆಯ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಲೇ ಇದ್ದಾರೆ. ಇದೀಗ ಅವರು ವಾರದ ಪ್ರತಿ ಶುಕ್ರವಾರವನ್ನು ‘ಸಹಾಯ ಹಸ್ತದ ದಿನ’ ಎಂದು ಘೋಷಿಸಿದ್ದಾರೆ.
ಪ್ರತಿ ಶುಕ್ರವಾರ ಅವರು ಬಡವರನ್ನು, ಆಂಧ್ರದ ದುರ್ಬಲ ವರ್ಗದ ಜನತೆಯನ್ನು ಭೇಟಿಯಾಗಿ ಅವರ ಕುಂದು ಕೊರತೆಗಳನ್ನು ಆಲಿಸಿ, ಪರಿಹಾರವನ್ನು ದೊರಕಿಸಿಕೊಡುವ ಕಾರ್ಯವನ್ನು ಮಾಡಲಿದ್ದಾರೆ.
ತನ್ನ ರಾಜ್ಯ ಅತೀ ಬಡವರ ದುಃಖ ದುಮ್ಮಾನಗಳನ್ನು ಅರಿತುಕೊಂಡಿರುವ ನಾಯ್ಡು, ಅವರಿಗೆ ತನ್ನಿಂದಾದಷ್ಟು ಸಹಾಯ ಮಾಡುವ ಪ್ರಯತ್ನವನ್ನು ಈ ಮುಖೇನ ನಡೆಸಲಿದ್ದಾರೆ.
ಇತ್ತೀಚಿಗಷ್ಟೇ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 9 ಕೋಟಿ ರೂಪಾಯಿಗಳನ್ನು ಬಡವರಿಗೆ ಹಂಚಿಕೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.