ರಾಂಚಿ: ಜಾರ್ಖಾಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಎರಡು ಮಹತ್ವದ ಮಸೂದೆಗಳಿಗೆ ಅನುಮೋದನೆಯನ್ನು ನೀಡಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯ ಮಸೂದೆ, 2017 ಮತ್ತು 2013ರ ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ.
ಈ ಎರಡು ಮಸೂದೆಗಳನ್ನು ಆ.14ರಂದು ಅಂತ್ಯವಾದ ವಿಧಾನಸಭಾ ಕಲಾಪದಲ್ಲಿ ಅನುಮೋದನೆಗೊಳಿಸಲಾಗಿತ್ತು. ಬಳಿಕ ಅದನ್ನು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿ ಕೊಡಲಾಗಿತ್ತು.
ಮೂಲಗಳ ಪ್ರಕಾರ ಜಾರ್ಖಾಂಡ್ ಸರ್ಕಾರ ಶೀಘ್ರದಲ್ಲೇ ಧಾರ್ಮಿಕ ಸ್ವಾತಂತ್ರ್ಯ ಮಸೂದೆಯನ್ನು ಜಾರಿಗೆ ತರಲಿದೆ. ಭೂ ಸ್ವಾಧೀನ ಮಸೂದೆಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿಕೊಡಲಿದೆ.
ಧಾರ್ಮಿಕ ಸ್ವಾತಂತ್ರ್ಯ ಮಸೂದೆಯಡಿ ಬಲವಂತವಾಗಿ ಅಥವಾ ಆಮಿಷವೊಡ್ಡಿ ವ್ಯಕ್ತಿಯನ್ನು ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, 3 ವರ್ಷ ಸಜೆ ವಿಧಿಸಲಾಗುತ್ತದೆ. ಒಂದು ವೇಳೆ ಈ ಮತಾಂತರಗೊಂಡವರು ಎಸ್ಟಿ, ಎಸ್ಸಿ ಅಥವಾ ಅಪ್ರಾಪ್ತರಾದರೆ ಸಜೆ 4 ವರ್ಷವಾಗಿರುತ್ತದೆ.
ಒಂದು ವೇಳೆ ವ್ಯಕ್ತಿ ಸ್ವ ಇಚ್ಚೆಯಿಂದ ಧರ್ಮ ಬದಲಾವಣೆ ಬಯಸಿದರೆ ಆತ ಉಪ ಜಿಲ್ಲಾಧಿಕಾರಿಗೆ ಈ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು ಮತ್ತು ಮತಾಂತರಗೊಳ್ಳುವ ದಿನ, ಜಾಗ ಮುಂತಾದ ವಿವರಗಳನ್ನು ಸಲ್ಲಿಸುವುದು ಕಡ್ಡಾಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.