ಬಾಗಲಕೋಟೆ: ಡಾ. ನಾಗರಾಜ್ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ಡಾ. ನಾಗರಾಜ ಜಮಖಂಡಿ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಸೆ.9 ರಂದು ನಡೆಯಲಿದೆ.
ನಗರದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಾ. ಎಂ.ಎಸ್. ದಡ್ಡೇನವರ, ಸಂಜೀವ ಬರಗುಂಡಿ, ಘನಶ್ಯಾಂ ಭಾಂಡಗೆ ಈ ವಿಷಯ ತಿಳಿಸಿದರು.
ಪ್ರಶಸ್ತಿ ಪ್ರದಾನ ಸಮಾರಂಭ ಸೆ.9 ರಂದು ಸಂಜೆ 5 ಕ್ಕೆ ಗುಳೇದಗುಡ್ಡದ ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಸಾನ್ನಿಧ್ಯವನ್ನು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಕಮತಗಿ ಹೊಳೆ ಹುಚ್ಚೇಶ್ವರ ಮಠದ ಹೊಳೆಹುಚ್ಚೇಶ್ವರ ಸ್ವಾಮೀಜಿ ವಹಿಸುವರು ಎಂದು ಅವರು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ, ಶಾಸಕರಾ ಎಚ್.ವೈ. ಮೇಟಿ, ಬಸವರಾಜ ಬೊಮ್ಮಾಯಿ, ಬಿ.ಬಿ. ಚಿಮ್ಮನಕಟ್ಟಿ, ಮಾಜಿ ಸಚಿವ ಮುರಗೇಶ ನಿರಾಣಿ, ಮೇಲ್ಮನೆ ಸದಸ್ಯ ಅರುಣ ಶಹಾಪೂರ, ಎಚ್.ಆರ್. ನಿರಾಣಿ, ಮಾಜಿ ಶಾಸಕ ಎಂ. ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ ಭಾಗವಹಿಸುವರು ಎಂದರು.
ಇದೇ ವೇಳೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಲಿದ್ದು, ಗೀತಾ ಶಿಂಧೆ ಬೆಣಗಿ ಅವರ ಸಾರಥ್ಯದಲ್ಲಿ ಸೀರೆ ಕುಪ್ಪಸದ ಬೆಡಗು ಮತ್ತು ವೀರಕುಣಿತ, ನೀರಿನಲ್ಲಿ ರಂಗೋಲಿ ಮತ್ತು ಸಂಖ್ಯಾ ಚಿತ್ರಕಲಾ ಕಾರ್ಯಕ್ರಮ, ಚಿತ್ರಗೀತೆಗಳಿಗೆ ಭರತ ನಾಟ್ಯ ಪ್ರದರ್ಶನ, ಹೊಳೆ ಆಲೂರಿನ ಅಂದ ವಸತಿ ಶಾಲೆ ಮಕ್ಕಳಿಂದ ಯೋಗ ಮತ್ತು ಮಲ್ಲಕಂಭ ಪ್ರದರ್ಶನ ಸೇರಿದಂತೆ ನಾನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದರು.
1988 ರ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ಗುರುಸತ್ಕಾರ, ರಕ್ತದಾನ ಶಿಬಿರ ಮತ್ತು ನೇತ್ರದಾನ ವಾಗ್ದಾನ ಮತ್ತು ಸಾಧಕ ನೇಕಾರರ ಸನ್ಮಾನ ನಡೆಯಲಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ. ಎಂ.ಎಸ್. ದಡ್ಡೇನವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಬರಗುಂಡಿ, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ದೇವರಾಜ ಪಾಟೀಲ, ನೇಹರು ಪತ್ತಿನ ಸಹಕಾರ ಬ್ಯಾಂಕ್ನ ಅಧ್ಯಕ್ಷ ಹೊಳೆಬಸು ಶೆಟ್ಟರ್, ಮೈಲಾರಲಿಂಗೇಶ್ವರ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮಹೇಶ ಹೊಸಗೌಡ್ರ ಭಾಗವಹಿಸುವರು ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.